ಪಡುಬೆಳ್ಳೆ ಶ್ರೀ ನಾರಾಯಣ ಗುರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಪಡುಬೆಳ್ಳೆ ಶ್ರೀ ನಾರಾಯಣ ಗುರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶ್ರೀ ನಾರಾಯಣ ಗುರು ಜಯಂತಿಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ದಯಾನಂದ ಕರ್ಕೇರ ಉಗ್ಗೆಲ್‌ಬೆಟ್ಟು ಇವರು ನಾರಾಯಣ ಗುರುಗಳ ಸಂದೇಶ ನೀಡಿದರು. 
ಶಾಲಾ ಆಡಳಿತ ಮಂಡಳಿ ಸದಸ್ಯ  ಶಿವಾಜಿ ಸುವರ್ಣರ ಅಧ್ಯಕ್ಷತೆಯಲ್ಲಿ  ನಡೆದ ಕಾರ್ಯಕ್ರಮದಲ್ಲಿ  ಕಾರ್ಯಕ್ರಮದ ಪ್ರಾಯೋಜಕರಾದ ಸುಧಾಕರ ಪೂಜಾರಿ ಪಡುಬೆಳ್ಳೆ ಹಾಗೂ ಉಭಯ ಮಾಧ್ಯಮಗಳ ಮುಖ್ಯ ಶಿಕ್ಷಕರುಗಳಾದ  ಜಿನರಾಜ್.ಸಿ.ಸಾಲಿಯಾನ್ ಹಾಗೂ ಉಷಾ.ಎಸ್  ಹಾಗೂ ಆಂಗ್ಲ ಮಾಧ್ಯಮದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸ್ಮಿತಾ ಪೈ, ಕೋಶಾಧಿಕಾರಿ ದಿವ್ಯಾ ಭಂಡಾರಿ ಉಪಸ್ಥಿತರಿದ್ದರು. 
ಶಾಲಾ ಶಿಕ್ಷಕಿಯರು ಕುಣಿತ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶಿಕ್ಷಕಿ ಸಂಗೀತಾ ಕಾರ್ಯಕ್ರಮ ಸಂಯೋಜಿಸಿದರು.
 
 
 
 
 
 
 
 
 
 
 

Leave a Reply