ಜಿಲ್ಲಾ ಮಹಿಳಾ ಮೋರ್ಚಾ ಉಡುಪಿ ಇದರ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನವರಾತ್ರಿಯ ಪರ್ವ ಕಾಲದಲ್ಲಿ ನವ ದುರ್ಗೆಯರಿಗೆ ಪ್ರಿಯವಾದ ವಿಶೇಷ ಕುಣಿತ ಭಜನೆಯ ಉದ್ಘಾಟನೆಯನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ನೆರವೇರಿಸಿದರು. ಅಧ್ಯಕ್ಷತೆಯನ್ನು ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ. ಎಸ್. ಶೆಟ್ಟಿಯವರು ವಹಿಸಿದರು. ಈ ಸಂದರ್ಭದಲ್ಲಿ ಮೂಲ್ಕಿ- ಮೂಡಬಿದ್ರೆ ಶಾಸಕರಾದ ಉಮಾ ನಾಥ ಕೋಟ್ಯಾನ್ ರವರು ಆಗಮಿಸಿ ಮಹಿಳಾ ಮೋರ್ಚಾದವರಿಗೆ ಶುಭ ಹಾರೈಸಿದರು.
ವಿಭಾಗ ಸಹ ಪ್ರಭಾರಿಗಳಾದ ಗೋಪಾಲ್ ಕೃಷ್ಣ ಹೇರಳೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಯಶಪಾಲ್ ಸುವರ್ಣ, ಬಿ. ರವಿ. ಅಮೀನ್, ಜಿಲ್ಲಾ ಬಿಜೆಪಿ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ, ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಶೀಲಾ. ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಭಾರಿ ಗೀತಾಂಜಲಿ ಸುವರ್ಣ, ನಗರ ಮಹಿಳಾ ಮೋರ್ಚಾ ಅಧ್ಯಕ್ಷ ಸರೋಜಾ ಶೆಟ್ಟಿಗಾರ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಅಲ್ಪ ಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್, ಕಾಪು ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಾ ಶೆಟ್ಟಿ, ಸುನೀತಾ ನಾಯಕ್, ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.