ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ : ಗುರುವಂದನೆ

ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ ವತಿಯಿಂದ ಮೈಸೂರಿನಲ್ಲಿ ಚಾತುರ್ಮಾಸ್ಯಾ ವೃತ ಕೈಗೊಂಡಿರುವ ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದಂಗಳವರಿಗೆ ಗುರುವಂದನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಅನುಗ್ರಹ ಸಂದೇಶ ನೀಡಿದ ಶ್ರೀಗಳವರು ಚಾತುರ್ಮಾಸ್ಯ ವೃತದ ಪ್ರಾಮುಖ್ಯತೆಯನ್ನು ವಿವರಿಸಿ ಎಲ್ಲರಿಗೂ ಫಲಮಂತ್ರಾಕ್ಷತೆಗಳನ್ನು ನೀಡಿದರು.

ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿಯ ಅಧ್ಯಕ್ಷ ಕೀಳಂಜೆ ಶ್ರೀ ಕೃಷ್ಣರಾಜ ಭಟ್ ಪಾದಪೂಜೆ ನಡೆಸಿ ಆರತಿ ಬೆಳಗಿದರು. ಸಮಿತಿಯ ಕಾರ್ಯದರ್ಶಿ ಶ್ರೀ ನಾಗರಾಜ ಭಟ್, ಉಪಾಧ್ಯಕ್ಷ ಶ್ರೀ ರಂಗನಾಥ ಸಾಮಗ, ಯುವ ಬ್ರಾಹ್ಮಣ ಪರಿಷತ್ ಇದರ ಅಧ್ಯಕ್ಷ ಶ್ರೀ ಚಂದ್ರಕಾಂತ ಭಟ್ ಹಾಗೂ ಇನ್ನಿತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply