ಕಿದಿಯೂರು ಹೋಟೆಲಲ್ಲಿ ತೃತೀಯ ಅಷ್ಟಪವಿತ್ರ ನಾಗಮಂಡಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

ಉಡುಪಿ: ನಗರದ ಹೊಟೇಲ್ ಕಿದಿಯೂರಿನ ಶ್ರೀನಾಗ ಸನ್ನಿಧಿಯಲ್ಲಿ ಜ.26ರಿಂದ 31 ರವರೆಗೆ ನಡೆಯಲಿರುವ ತೃತೀಯ ಅಷ್ಟಪವಿತ್ರ ನಾಗಮಂಡಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕಿದಿಯೂರು ಹೊಟೇಲ್‌ನ ಮಾಧವಕೃಷ್ಣ ಸಭಾಂಗಣದಲ್ಲಿ ನಡೆಯಿತು.

ಪುತ್ತಿಗೆ ಮಠದ ಭಾವೀ ಪರ್ಯಾಯ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಬಳಿಕ ಆಶೀರ್ವಚನ ನೀಡಿದ ಶ್ರೀಗಳು, ಮನುಷ್ಯರ ಕೈಯಲ್ಲಿರುವ ಸಂಪತ್ತನ್ನು ಒಂದೋ ದಾನ ಮಾಡಬೇಕು ಅಥವಾ ತಿಂದು ಖಾಲಿ ಮಾಡಬೇಕು. ಇಲ್ಲವೇ ಯಾರೋ ಕಳ್ಳರು ದೋಚಿಕೊಂಡು ಹೋಗುವ ಸಾಧ್ಯತೆ ಇದೆ.

ಹೀಗಾಗಿ ಶ್ರೇಷ್ಠ ಕಾರ್ಯಕ್ಕೆ ವಿನಿಯೋಗಿಸಿಕೊಂಡು ದಾನ ನೀಡುವ ಮನೋಭಾವವನ್ನು ಮೈಗೂಡಿಸಿಕೊಳ್ಳಬೇಕು. ದೇವರು ಕೊಟ್ಟ ಸಂಪತ್ತನ್ನು ದೇವತಾ ಕಾರ್ಯಗಳಿಗೆ ಸದುಪಯೋಗ ಪಡಿಸಬೇಕು ಎಂದರು.

ವೇದಮೂರ್ತಿ ಜ್ಯೋತಿಷ್ಯ ವಿದ್ವಾನ್ ಕಬಿಯಾಡಿ ಜಯರಾಮ ಆಚಾರ್ಯ, ಕಿದಿಯೂರು ಹೋಟೆಲ್ ಮಾಲಕ ಭುವನೇಂದ್ರ ಕಿದಿಯೂರು, ಅಷ್ಟಪವಿತ್ರ ನಾಗಮಂಡಲೋತ್ಸವ ಆಯೋಜನಾ ಸಮಿತಿ ಗೌರವಾಧ್ಯಕ್ಷ ನಾಡೋಜ ಡಾ.ಜಿ. ಶಂಕರ್ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply