ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ವಸಂತ ಮಾಸದ ಕೊನೆಯ ದಿನ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಅಲಂಕಾರ, ಭಜನಾ ಕಾರ್ಯಕ್ರಮ, ವಸಂತ ಪೂಜೆ, ಅಷ್ಟಾವಧಾನ ಸೇವೆ, ಪಲ್ಲಕಿ ಉತ್ಸವ, ಹಾಗೂ ಪಲ್ಲಕಿ ಉತ್ಸವ ನಡೆಯಿತು. ಪ್ರತಿ ವರುಷದಂತೆ ಸ್ವಯಂಸೇವಕರು ಮತ್ತು ಜಿ.ಎಸ್.ಬಿ ಯುವಕ ಮಂಡಳಿಯ ವತಿಯಿಂದ ವಸಂತೋತ್ಸವವು ಶುಕ್ರವಾರದಂದು ವಿಜೃಂಭಣೆಯಿಂದ ನೆಡೆಯಿತು, ಸಾವಿರಾರು ಭಕ್ತರೂ ಪಾಲ್ಗೊಂಡರು.
ಧಾರ್ಮಿಕ ಪೂಜಾ ವಿಧಾನಗಳನ್ನು ಅರ್ಚಕ ವಿನಾಯಕ ಭಟ್ ನೆರವೇರಿಸಿದರು. ದೇವಳದ ಆಡಳಿತ ಮುಕ್ತಸೇರಾದ ಪಿ ವಿ ಶೆಣೈ, ವಿಶ್ವನಾಥ ಭಟ್, ಗಣೇಶ ಕಿಣೆ ,ವಿಶಾಲ್ ಶೆಣೈ, ನರಹರಿ ಪೈ, ದೀಪಕ್ ಭಟ್, ಪ್ರಕಾಶ ಶೆಣೈ, ಜಿ ಎಸ್ ಬಿ, ಯುವಕ ಮಂಡಳಿ ಅಧ್ಯಕ್ಷ ನಿತೇಶ್ ಶೆಣೈ, ಪ್ರದೀಪ್ ರಾವ್, ಜಿ ಎಸ್ ಬಿ, ಯುವಕ ಮಂಡಳಿ ಸದಸ್ಯರು, ಮಹಿಳಾ ಮಂಡಳಿಯ ಸದಸ್ಯರು ಸಮಾಜ ಭಾಂದವರು ಉಪಸ್ಥಿತರಿದ್ದರು.