ಶ್ರೀಕೃಷ್ಣ  ಮಠದಲ್ಲಿ ಸಾಧಕರಿಗೆ ಸನ್ಮಾನ 

ಉಡುಪಿ: ಸೋಮವಾರ ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ, ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ, ವಿಶ್ವಗುರು ಶ್ರೀಮನ್ಮಧ್ವಾಚಾರ್ಯರು ಶ್ರೀಕೃಷ್ಣನನ್ನು ಪ್ರತಿಷ್ಠಾಪಿಸಿದ ಅಂಗವಾಗಿ ನಡೆಯುವ ಸಪ್ತೋತ್ಸವದ ಕಾರ್ಯಕ್ರಮದಲ್ಲಿ ಪರ್ಯಾಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ರಾಘವೇಂದ್ರ ಕಿಣಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. 
ವಿವಿಧ  ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯ ವಿದ್ವಾನ್ ಸಾಂತೂರು ಪದ್ಮನಾಭ ತಂತ್ರಿ, ಸಾಮವೇದ ವಿದ್ವಾಂಸಕಲ್ಮಂಜೆ ಸುದರ್ಶನ ಸಾಮಗ, ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ರಾಧಾಕೃಷ್ಣ ಆಚಾರ್ಯ, ಛಾಯಾಗ್ರಾಹಕರು ಮತ್ತು ಚಿತ್ರಕಲಾವಿದಕಟಪಾಡಿ ರಮೇಶ್ ರಾವ್ ಮತ್ತು ಕೇಂದ್ರ ಸರಕಾರದ ಸ್ವಚ್ಛ ಭಾರತ್ ಪ್ರಶಸ್ತಿ ವಿಜೇತರಾದ ಸಮೃದ್ಧಿ ಮಹಿಳಾ ಮಂಡಳಿ, ಪೇತ್ರಿ ಇವರನ್ನು ಪರ್ಯಾಯ ಶ್ರೀಪಾದರು  ಸನ್ಮಾನಿಸಿದರು.
 
 
 
 
 
 
 
 
 
 
 

Leave a Reply