ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಿವಾಹ; ಅದಮಾರು ಉಭಯ ಶ್ರೀಗಳ ಆಶೀರ್ವಾದ ಪ್ರಸಾದ

ಬೆಂಗಳೂರು: ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ಭಕ್ತೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಾಙ್ಮಯಿ ಮತ್ತು ಪ್ರತೀಕ್ ವಿವಾಹ ಇಲ್ಲಿನ ಟ್ಯಾಮರಿಂಡ್ ಟ್ರೀ ನಲ್ಲಿ ಬುಧವಾರ ನೆರವೇರಿತು.
ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಮತ್ತು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ವಧು ವರರನ್ನು ಹರಸಿ ಕಳುಹಿಸಿದ ಮಧುಪರ್ಕ, ಸೀರೆ, ಶಾಲು, ಗಂಧ ಪ್ರಸಾದವನ್ನು ಶ್ರೀಮಠದ ವ್ಯವಸ್ಥಾಪಕ ಗೋವಿಂದರಾಜ್ ಮತ್ತು ಶಿಷ್ಯರು ಮಂತ್ರ ಘೋಷದ ಮೂಲಕ ನೀಡಿದರು.

ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಅನುಗ್ರಹಿಸಿ ಕಳುಹಿಸಿದ ಉಡುಪಿ ಸೀರೆಯನ್ನು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ನೀಡಲಾಯಿತು. ಜೊತೆಗೆ ಶ್ರೀ ವಿಶ್ವಪ್ರಿಯತೀರ್ಥರು ಶ್ರೀಕೃಷ್ಣನಿಗೆ ತೊಡಿಸಿದ್ದ ರೆಂಜೆ ಹೂವಿನ ನಿರ್ಮಾಲ್ಯ ಹಾರವನ್ನು ವಧು ವರರಿಗೆ ತೊಡಿಸಲಾಯಿತು.

 
 
 
 
 
 
 
 
 
 
 

Leave a Reply