ಸರಳ ಪರ್ಯಾಯೋತ್ಸವ , ದರ್ಬಾರ್ ಸಭೆ : ಸಮಿತಿ ಘೋಷಣೆ .
ಬಹುನಿರೀಕ್ಷೆಯ ಧಾರ್ಮಿಕ ಉತ್ಸವ ನಾಡಹಬ್ಬ ಉಡುಪಿ ಪರ್ಯಾಯೋತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಅತೀ ಸರಳವಾಗಿ ನಡೆಸಲು ತೀರ್ಮಾನಿಸಿರುವುದಾಗಿ ಸಮಿತಿ ಕಾರ್ಯಾಧ್ಯಕ್ಷ ಕೆ ರಘುಪತಿ ಭಟ್ ಘೋಷಿಸಿದ್ದಾರೆ .
ಸಮಿತಿ ಗೌರವಾಧ್ಯಕ್ಷ ಕೆ ಸೂರ್ಯನಾರಾಯಣ ಉಪಾಧ್ಯಾಯರು ಹಾಗೂ ಶಾಸಕರ ಉಪಸ್ಥಿತಿ ಯಲ್ಲಿ ಶನಿವಾರ ರಾತ್ರಿ ನಡೆದ ಶ್ರೀ ಕೃಷ್ಣಾಪುರ ಪರ್ಯಾಯೋತ್ಸವ ಸಮಿತಿ ಪ್ರಮುಖರ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ .
ಕೋವಿಡ್ ಪರಿಸ್ಥಿತಿ ಉಲ್ಬಣಿಸುತ್ತಿರುವ ಹಿನ್ನೆಲೆ ಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅದಕ್ಕೆ ಪೂರ್ಣ ವಾಗಿ ಸಹಕರಿಸಬೇಕೆನ್ನುವ ಭಾವೀ ಪರ್ಯಾಯ ಶ್ರೀ ಕೃಷ್ಣಾಪುರ ಶ್ರೀಪಾದರ ಆಶಯದಂತೆ ಜನವರಿ 17 ರ ನಡುರಾತ್ರಿ ನಡೆಯಲಿರುವ ( 18 ರ ನಸುಕಿನ ವೇಳೆ) ನಡೆಯಲಿರುವ ಬಹುನಿರೀಕ್ಷೆಯ ಪರ್ಯಾಯೋತ್ಸವ ಮೆರವಣಿಗೆ ಮತ್ತು ನಂತರ ರಾಜಾಂಗಣದಲ್ಲಿ ನಡೆಯಲಿರುವ ಪರ್ಯಾಯ ದರ್ಬಾರ್ ಸಭೆಯನ್ನು ತೀರಾ ಸಾಂಪ್ರದಾಯಿಕತೆಗೆ ಆದ್ಯತೆ ನೀಡಿ ತೀರಾ ಸರಳವಾಗಿ ನಡೆಸಲು ನಿರ್ಧರಿಸಲಾಗಿದೆ .
ಈ ಕಾರ್ಯಕ್ರಮಗಳನ್ನು ವಿವಿಧ ಟಿ ವಿ ವಾಹಿನಿ ಗಳಲ್ಲಿ ನೇರಪ್ರಸಾರ ಮಾಡಲಾಗುವುದು ಆದ್ದರಿಂದ ಭಕ್ತಾದಿಗಳು ಈ ವ್ಯವಸ್ಥೆಯ ಸದುಪಯೋಗ ಪಡೆದುಕೊಂಡು ಸಹಕರಿಸ ಬೇಕೆಂದು ಭಕ್ತರು ಮತ್ತು ನಾಗರಿಕರಲ್ಲಿ ನಮ್ರರಾಗಿ ವಿನಂತಿಸುತ್ತೇವೆ .
ಆ ಹಿನ್ನೆಲೆಯಲ್ಲಿ ಪರ್ಯಾಯೋತ್ಸವ ಮೆರವಣಿಗೆ ಯಲ್ಲಿ ಉತ್ಸವ ಸಮಿತಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸಿದ್ಧಪಡಿಸಲಾಗಿದ್ದ ಜಾನಪದ ತಂಡಗಳನ್ನು ಮತ್ತು ಕೆಲವು ಟ್ಯಾಬ್ಲೋಗಳನ್ನು ರದ್ದುಪಡಿಸಿದ್ದೇವೆ .
ಅಷ್ಟ ಮಠಾಧೀಶರು ಕುಳಿತುಕೊಳ್ಳುವ ಮೇನೆ ಯನ್ನು ಹೊತ್ತ ವಾಹನಗಳು , ವಾದ್ಯ ಚಂಡೆ , ಡೋಲು , ಬಿರುದಾವಳಿ ಮತ್ತು ಕೇವಲ ಪೌರಾಣಿಕ ದೃಶ್ಯಾವಳಿಗಳನ್ನೊಳಗೊಂಡ ಟ್ಯಾಬ್ಲೋಗಳು ಮಾತ್ರ ಮೆರಣಿಗೆಯಲ್ಲಿ ಇರುತ್ತವೆ .
ಪರ್ಯಾಯ ದರ್ಬಾರ್ ಸಭೆಯಲ್ಲೂ ಸೀಮಿತ ಸಂಖ್ಯೆಯ ಆಸನ ವ್ಯವಸ್ಥೆ ಇರುತ್ತವೆ . ಇವುಗಳನ್ನು ಜನತೆ ಅಗತ್ಯವಾಗಿ ಗಮನಿಸಬೇಕು .
ಎರಡು ಕೋವಿಡ್ ಲಸಿಕೆಗಳನ್ನು ಪಡೆದವರಿಗೆ ಮಾತ್ರ ಉತ್ಸವದಲ್ಲಿ ಭಾಗವಹಿಸಲು ಆದ್ಯತೆ ನೀಡಲಾಗಿದೆ . ಕಡ್ಡಾಯವಾಗಿ ಮಾಸ್ಕ್ ಧರಿಸು ವುದು ಮತ್ತು ಸಾಮಾಜಿಕ ಅಂತರವನ್ಬು ಕಾಪಾಡಿ ಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ .
ಈ ನಿಟ್ಟಿನಲ್ಲಿ ಸಮಿತಿಯು ಜಿಲ್ಲಾಡಳಿತದೊಂದಿಗೆ ಪೂರ್ಣ ಸಹಕರಿಸಲಿದ್ದು ಜನತೆಯೂ ಸಹಕರಿಸು ವಂತೆ ಮತ್ತೊಮ್ಮೆ ವಿನಂತಿಸುತ್ತೇವೆ ಎಂದು ಭಟ್ ತಿಳಿಸಿದ್ದಾರೆ .