ಕೊರೋನಾ ಮಹಾಮಾರಿ ಸಂದರ್ಭದಲ್ಲಿ ಪೊಲೀಸರು ಜಿಲ್ಲೆಯ ಗಡಿಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ನಡೆಸಿದರೆ ಪರಿಣಾಮ ಜಾಸ್ತಿ ವೈರಸ್ ಹರಡದಂತೆವಿಶೇಷ ಗಮನವಿಟ್ಟು ನೋಡಿಕೊಂಡಿದ್ದು ಪೊಲೀಸ್ ಇಲಾಖೆ. ಜಿಲ್ಲೆಯಲ್ಲಿ ಬಂದ ಸತತ ಮಳೆಯ ಸಂದರ್ಭದಲ್ಲಿ ಜೀವದ ಹಂಗು ತೊರೆದು ಸಾರ್ವಜನಿಕರಿಗೆ ನೆರವು ನೀಡುವ ಮೂಲಕ ಜಿಲ್ಲೆಯಲ್ಲಿ ಎಲ್ಲಿಯೂ ಸಾವು ನೋವು ಉಂಟಾಗದಂತೆ ತಮ್ಮ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ ಅಲ್ಲದೆ ಜಿಲ್ಲೆಯಲ್ಲಿ ಡ್ರಗ್ಸ್ ಮಹಾಮಾರಿಯನ್ನು ಹತ್ತಿಕ್ಕುವ ಕಾರ್ಯದಲ್ಲಿ ಎಸ್ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ಅತ್ಯುತ್ತಮ ಕೆಲಸ ಮಾಡಿದೆ. ಡ್ರಗ್ಸ್ ಮುಕ್ತ ಜಿಲ್ಲೆಯಾಗುವತ್ತ ಶ್ರನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದರು
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ದೇಶದಲ್ಲಿಆಂತರಿಕ ಶತ್ರುಗಳು ಹಾಗೂ ದೇಶ ವಿರೋಧಿ ಕೃತ್ಯಗಳನ್ನೆಸಗುವ ದುಷ್ಟರ ವಿರುದ್ಧ ಧೀರತನದಿಂದ ಹೋರಾಡಿ ಪ್ರಾಣ ಸಮರ್ಪಿಸಿದ ಪೊಲೀಸ್ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸುವುದರ ಮೂಲಕ ಈ ದಿನ ಪೊಲೀಸ್ ಹುತಾತ್ಮರ ದಿನವನ್ನಾಗಿ ಆಚರಿಸುತ್ತಿದ್ದೇವೆ ಎಂದು ಹೇಳಿದರು. ಒಂದು ವರ್ಷದ ಅವಧಿಯಲ್ಲಿ ದೇಶದ ವಿವಿಧ ರಾಜ್ಯಗಳ ಹಾಗೂ ಕೇಂದ್ರ ಪೊಲೀಸ್ ದಳದ ಒಟ್ಟು 264 ಪೊಲೀಸರು ಹುತಾತ್ಮರಾಗಿದ್ದಾರೆ. ಇವರಲ್ಲಿ ಕರ್ನಾಟಕದ 17 ಪೊಲೀಸರು ಸೇರಿದ್ದಾರೆ ಎಂದು ತಿಳಿಸಿದರು
ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ,, ಪೊಲೀಸ್ ಅಧಿಕಾರಿಗಳು, ಪತ್ರಕರ್ತರು, ನಿವೃತ್ತ ಪೊಲೀಸ್ ಅಧಿಕಾರಿಗಳು, ಸಮಾಜ ಸೇವಕರು, ಮಾಜಿ ಸೈನಿಕರು ಪುಷ್ಪಗುಚ್ಛ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ, ಉಡುಪಿ ಡಿವೈಎಸ್ಪಿ ಜೈಶಂಕರ್, ಕಾರ್ಕಳ ಡಿವೈಎಸ್ಪಿ ಭರತ್ ರೆಡ್ಡಿ ಹಾಗೂ ಇತರರು ಉಪಸ್ಥೀತರಿದ್ದರು. ಉಡುಪಿ ವೃತ್ತ ನೀರಿಕ್ಷಕ ಮಂಜುನಾಥ್ ಅವರು ಕಾರ್ಯಕ್ರಮ ನಿರೂಪಿಸಿದರು.