​ಜೀವದ ಹಂಗು ತೊರೆದು ​ಶಾಂತಿ​~ಸುವ್ಯವಸ್ಥೆ ಕಾಪಡುವಲ್ಲಿ ಪೊಲೀಸರ ಸೇವೆ ​ಶ್ಲಾಘನೀಯ– ಜಿಲ್ಲಾಧಿಕಾರಿ ಜಿ ಜಗದೀಶ್

ಉಡುಪಿ: ಪೊಲೀಸರ ಕರ್ತವ್ಯ ನಿಷ್ಠೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರೂ ಶಾಂತಿಯುತ ಮತ್ತು ನೆಮ್ಮದಿ​ಯ ಜೀವನ ನಡೆಸಲು ​ಸಹಾಯವಾಗಿದೆ ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು.​ ಅವರು ಬುಧವಾರ ಜಿಲ್ಲಾ ಪರೇಡ್ ಮೈದಾನದಲ್ಲಿ ಪೊಲೀಸ್ ಇಲಾಖೆಯಿಂದ ಕರ್ತವ್ಯದ ಪಾಲನೆಯಲ್ಲಿಪ್ರಾಣ ಸಮರ್ಪಿಸಿದ ಪೊಲೀಸ್ ಹುತಾತ್ಮರ ದಿನಾಚರಣೆ​ಯ ​ ಕಾರ್ಯಕ್ರಮದಲ್ಲಿ ಮಾತನಾಡಿದರು.​ ಕಷ್ಟದ ಸಂದರ್ಭದಲ್ಲಿ  ಮೊದಲಿಗೆ ನೆನ​ಪಾಗುವುದು ಪೊಲೀಸ​ರು.  ​ದೈರ್ಯದಿಂದ ಕರ್ತವ್ಯ ನಿರ್ವಹಿಸುವ ಪೊಲೀಸರ ಸೇವೆ ​ಶ್ಲಾಘನೀಯ 

ಕೊರೋನಾ ಮಹಾಮಾರಿ ಸಂದರ್ಭದಲ್ಲಿ ಪೊಲೀಸರು ಜಿಲ್ಲೆಯ ಗಡಿಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ​ನಡೆಸಿದರೆ ಪರಿಣಾಮ ​ಜಾಸ್ತಿ ವೈರಸ್ ಹರಡದಂತೆವಿಶೇಷ ಗಮನವಿಟ್ಟು ನೋಡಿಕೊಂಡಿದ್ದು ಪೊಲೀಸ್ ಇಲಾಖೆ.  ​ಜಿಲ್ಲೆಯಲ್ಲಿ  ಬಂದ ​ಸತತ ಮಳೆಯ ಸಂದರ್ಭದಲ್ಲಿ ಜೀವದ ಹಂಗು ತೊರೆದು ​ಸಾರ್ವಜನಿಕರಿಗೆ ನೆರವು ನೀಡುವ ಮೂಲಕ ಜಿಲ್ಲೆಯಲ್ಲಿ ​ಎಲ್ಲಿಯೂ ಸಾವು ನೋವು ಉಂಟಾಗದಂತೆ ​ತಮ್ಮ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ ​​ಅಲ್ಲದೆ  ​ಜಿಲ್ಲೆಯಲ್ಲಿ ಡ್ರಗ್ಸ್ ಮಹಾಮಾರಿಯನ್ನು ಹತ್ತಿಕ್ಕುವ ಕಾರ್ಯದಲ್ಲಿ ಎಸ್ಪಿ​ ವಿಷ್ಣುವರ್ಧನ್ ನೇತೃತ್ವದಲ್ಲಿ  ಅತ್ಯುತ್ತಮ ಕೆಲಸ ​ಮಾಡಿದೆ.   ಡ್ರಗ್ಸ್ ಮುಕ್ತ ಜಿಲ್ಲೆಯಾಗುವತ್ತ ಶ್ರ​ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದರು 
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ದೇಶದಲ್ಲಿಆಂತರಿಕ ಶತ್ರುಗಳು ಹಾಗೂ ದೇಶ ವಿರೋಧಿ ಕೃತ್ಯಗಳನ್ನೆಸಗುವ ದುಷ್ಟರ ವಿರುದ್ಧ ಧೀರತನದಿಂದ ಹೋರಾಡಿ ಪ್ರಾಣ ಸಮರ್ಪಿಸಿದ ಪೊಲೀಸ್ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸುವುದರ ಮೂಲಕ ಈ ದಿನ ಪೊಲೀಸ್ ಹುತಾತ್ಮರ ದಿನವನ್ನಾಗಿ ಆಚರಿಸುತ್ತಿದ್ದೇವೆ ಎಂದು ಹೇಳಿದರು.​ ಒಂದು ವರ್ಷದ ಅವಧಿಯಲ್ಲಿ​ ​ದೇಶದ ವಿವಿಧ ರಾಜ್ಯಗಳ ಹಾಗೂ ಕೇಂದ್ರ ಪೊಲೀಸ್ ದಳದ ಒಟ್ಟು 264 ಪೊಲೀಸರು ​ಹುತಾತ್ಮರಾಗಿದ್ದಾರೆ.  ಇವರಲ್ಲಿ​ ​ಕರ್ನಾಟಕದ 17 ಪೊಲೀಸರು ಸೇರಿದ್ದಾರೆ ಎಂದು ​ತಿಳಿಸಿದರು 

ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ​,, ಪೊಲೀಸ್ ಅಧಿಕಾರಿಗಳು, ಪತ್ರಕರ್ತರು, ನಿವೃತ್ತ ಪೊಲೀಸ್ ಅಧಿಕಾರಿಗಳು, ಸಮಾಜ ಸೇವಕರು, ಮಾಜಿ ಸೈನಿಕರು ಪುಷ್ಪಗುಚ್ಛ ಅರ್ಪಿಸಿದರು.​ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ, ಉಡುಪಿ ಡಿವೈಎಸ್ಪಿ ಜೈಶಂಕರ್, ಕಾರ್ಕಳ ಡಿವೈಎಸ್ಪಿ ಭರತ್ ರೆಡ್ಡಿ ಹಾಗೂ ಇತರರು ಉಪಸ್ಥೀತರಿದ್ದರು.​​ ಉಡುಪಿ ವೃತ್ತ ನೀರಿಕ್ಷಕ ಮಂಜುನಾಥ್ ಅವರು ಕಾರ್ಯಕ್ರಮ ನಿರೂಪಿಸಿದರು.
 
 
 
 
 
 
 
 
 
 
 

Leave a Reply