ಪುತ್ತಿಗೆ ಮಠ ~ ಕೋಟಿ ಗೀತಾ ಲೇಖನ ಯಜ್ಞ ಪುಸ್ತಕ ಬಿಡುಗಡೆ

ಉಡುಪಿ: ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಚತುರ್ಥ ಪರ್ಯಾಯ ಅಂಗವಾಗಿ ಸಂಕಲ್ಪಿಸಿರುವ ಕೋಟಿ ಗೀತಾ ಲೇಖನ ಯಜ್ಞದ ಕೋಟಿ ಲೇಖನ ಪುಸ್ತಕಗಳ ಬಿಡುಗಡೆ ಮಾ. 4ರಂದು ನಡೆಯಲಿದೆ.
ಅಂದು ಸಂಜೆ 5 ಗಂಟೆಗೆ ರಥಬೀದಿಯ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಇಂಗ್ಲಿಷ್ ಆವೃತ್ತಿಯನ್ನು ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಕನ್ನಡ ಆವೃತ್ತಿಯನ್ನು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಲೋಕಾರ್ಪಣೆ ಗೊಳಿಸುವರು .
ಭಾವೀ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸುವರು. ಅದಕ್ಕೂ ಮುನ್ನ ಗೀತಾ ಲೇಖನ ಪುಸ್ತಕಗಳ ವೈಭವದ ಮೆರವಣಿಗೆ ರಥಬೀದಿಯಲ್ಲಿ ನಡೆಯಲಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ
 
 
 
 
 
 
 
 
 
 
 

Leave a Reply