2 ವರ್ಷದಲ್ಲಿ ಶ್ರೀಕೃಷ್ಣನಿಗೆ ಬಂಗಾರದ ರಥ : ಪುತ್ತಿಗೆ ಸುಗುಣೇಂದ್ರ ಶ್ರೀಪಾದರು 

ಮಂಗಳೂರು: ಶ್ರೀಕೃಷ್ಣನಿಗೆ ಬಂಗಾರದ ರಥ ನಿರ್ಮಿಸುವುದು ಸೇರಿ ತಮ್ಮ ನಾಲ್ಕನೇ ಪರ್ಯಾಯದ ಅವಧಿಯಲ್ಲಿ (2 ವರ್ಷ) ಐದು ಮಹತ್ವದ ಯೋಜನೆಗಳನ್ನು ಈ ಬಾರಿ ಉಡುಪಿ ಪರ್ಯಾಯ ಪೀಠಾರೋಹಣ ಮಾಡಲಿರುವ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಈ ಬಾರಿಯ ಪರ್ಯಾಯವನ್ನು ವಿಶ್ವ ಗೀತಾ ಎಂದು ಕರೆಯಲಾಗುವುದು. ಈ ಪರ್ಯಾಯದಲ್ಲಿ ಭಗವದ್ಗೀತೆ ಬಗ್ಗೆ ಅರ್ಥಪೂರ್ಣ ಜಾಗೃತಿ ಮೂಡಿಸಲಾಗುವುದು.
ಯಾತ್ರಿಗಳ ಅನುಕೂಲಕ್ಕೆ 108 ಕೊಠಡಿಗಳ ಅಷ್ಟೋತ್ತರ ಭವನ ನಿರ್ಮಿಸಲು ಸಂಕಲ್ಪಿಸಲಾಗಿದೆ. ಜತೆಗೆ ದೇಶ, ವಿದೇಶಗಳಲ್ಲಿರುವ 15 ಪುತ್ತಿಗೆ ಮಠದ ಶಾಖೆಗಳನ್ನು 108 ಕಡೆಗಳಿಗೆ ವಿಸ್ತರಿಸಲು ಯೋಚನೆ ಮಾಡಲಾಗಿದೆ ಎಂದು ಸ್ವಾಮೀಜಿ ತಿಳಿಸಿದರು.
 
 
 
 
 
 
 
 
 
 
 

Leave a Reply