ವಿಶಿಷ್ಟ ಚೇತನ ‘ಪಾವನ’- ಭರವಸೆಯ ಆಶಾಕಿರಣ

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ  ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್ ನ  ‘ ವಿಶೇಷ ಸಂದರ್ಶನ ಕಾರ್ಯಕ್ರಮ ಜುಲೈ ತಿಂಗಳ ದಿನಾಂಕ *20 ರಂದು  ಗುರುವಾರ 5.30ರ ಸಮಯಕ್ಕೆ ಪ್ರಸಾರವಾಗಲಿದ್ದು
 ಈ ಕಾರ್ಯಕ್ರಮದಲ್ಲಿ ಪಾವನ ನಿಟ್ಟೂರು ಭಾಗವಹಿಸಲಿದ್ದಾರೆ. ಎಳೆಯ ವಯಸ್ಸಿನಲ್ಲಿಯೇ ತನ್ನ ಸಂಪೂರ್ಣ ದೃಷ್ಟಿ ಯನ್ನು ಕಳೆದುಕೊಂಡಿದ್ದರೂ ತನ್ನ ಸ್ವಂತ ಪರಿಶ್ರಮದಿಂದ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣವನ್ನು ಪೂರೈಸಿ, ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ವಿರಳ ಚೇತನ ಪಾವನ ಪಿ.ಯು.ಸಿ ಕಲಾವಿಭಾಗದಲ್ಲಿ 93% ಅಂಕಗಳೊಂದಿಗೆ, ವಿಶೇಷವಾಗಿ ಸಮಾಜಶಾಸ್ತ್ರ ವಿಷಯದಲ್ಲಿ 98 ಅಂಕಗಳೊಂದಿಗೆ ಉಡುಪಿ ಸರಕಾರಿ ಪದವಿಪೂರ್ವ ಕಾಲೇಜಿನ(ಬೋರ್ಡ್ ಹೈಸ್ಕೂಲ್ ) ಕಲಾವಿಭಾಗದಲ್ಲಿ ಟಾಪರ್  ಅಗಿ ಗುರುತಿಸಿಕೊಂಡಿದ್ದು ಈ ಕಾರ್ಯಕ್ರಮವು  ಜುಲೈ *21 ರಂದು ಶುಕ್ರವಾರ ಮಧ್ಯಾಹ್ನ 1.30ಕ್ಕೆ ಮರು ಪ್ರಸಾರವಾಗಲಿದೆ ಎಂದು ರೇಡಿಯೊ ಮಣಿಪಾಲದ ಸಹಾಯಕ ಪ್ರಾಧ್ಯಾಪಕರು ಮತ್ತು ಸಂಯೋಜಕರಾಗಿರುವ ಡಾ.ರಶ್ಮಿ ಅಮ್ಮೆಂಬಳ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
 
 
 
 
 
 
 
 
 
 

Leave a Reply