ರೇಡಿಯೊ ಮಣಿಪಾಲದಲ್ಲಿ ಮನದ ಮಾತು

ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರ ಮತ್ತು ಉಡುಪಿಯ ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ ಸಹಯೋಗದಲ್ಲಿ ಮನದ ಮಾತು ಮಾನಸಿಕ ಆರೋಗ್ಯ ಕುರಿತು ಸರಣಿ ಕಾರ್ಯಕ್ರಮದ 5ನೇ ಸಂಚಿಕೆ ಮೇ ತಿಂಗಳ 31 ರಂದು ಶುಕ್ರವಾರ ಸಂಜೆ 5 ಗಂಟೆಗೆ ಪ್ರಸಾರವಾಗಲಿದೆ ಮತ್ತು ಜೂನ್ 1ರಂದು ಶನಿವಾರ ಮಧ್ಯಾಹ್ನ 1 ಗಂಟೆಗೆ ಮರುಪ್ರಸಾರವಾಗಲಿದೆ.

ಈ ವಾರದ ಸಂಚಿಕೆಯಲ್ಲಿ ಉಡುಪಿಯ ಡಾ. ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆಯಲ್ಲಿ ಆಯುರ್ವೇದ ತಜ್ಞ ವೈದ್ಯರಾಗಿರುವ ಡಾ.‌ಸುನೀಲ್ ಕುಮಾರ್ ಜಿ ಅವರು ತಂಬಾಕು ಸೇವನೆಯ ದುಷ್ಪರಿಣಾಮಗಳು ಎಂಬ ವಿಷಯದ ಕುರಿತು ವಿಶೇಷ ಮಾಹಿತಿ ನೀಡಲಿದ್ದಾರೆ.

ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal

ಮತ್ತು ಐಫೋನ್ ನ

https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply