ರಾಮ ಮಂದಿರ ನಿರ್ಮಾಣಕ್ಕೆರೂ 1 ಲಕ್ಷ ರೂ. ದೇಣಿಗೆ ನೀಡಿದ ಶಾಸಕ ರಘುಪತಿ ಭಟ್

ಉಡುಪಿ: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯಕ್ಕೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಅಧಿಕೃತವಾಗಿ ಚಾಲನೆ ನೀಡಿದೆ. ಈ ಹಿನ್ನೆಲೆ ಉಡುಪಿ ಶಾಸಕ ರಘುಪತಿ ಭಟ್ ತನ್ನ ವೈಯುಕ್ತಿಕ ರೂ 1 ಲಕ್ಷ ದೇಣಿಗೆ ದೇಣಿಗೆ ನೀಡಿದ್ದಾರೆ.

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ನಿಧಿ ಸಂಗ್ರಹ ಅಭಿಯಾನ 15-01-2021 ರಿಂದ 05-02-2021 ವರೆಗೆ ನಡೆಯುತ್ತಿದ್ದು ಭಾನುವಾರ ಕರಂಬಳ್ಳಿ ವಾರ್ಡಿನಲ್ಲಿ ಶ್ರೀರಾಮ ಜನ್ಮಭೂಮಿ ನಿಧಿ ಸಂಗ್ರಹಣಾ ಅಭಿಯಾನಕ್ಕೆ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ರೂ.1.00 ಲಕ್ಷ ವೈಯಕ್ತಿಕ ದೇಣಿಗೆ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರು, ಪಕ್ಷದ ಹಿರಿಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply