ಕೋಟಿ ಗಾಯತ್ರಿ ಜಪ ಅಭಿಯಾನ ಹಾಗೂ ಲಕ್ಷ ಲಲಿತಾ ಸಹಸ್ರನಾಮ ಪಾರಾಯಣ ಅಭಿಯಾನ ಮತ್ತು ಮಹಾಯಾಗ~  ಪೂರ್ವಭಾವಿ ಸಭೆ

ಶ್ರೀ ಶಾಂತಿಮತೀ ಪ್ರತಿಷ್ಠಾನದ ದಶಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ” ಕೋಟಿ ಗಾಯತ್ರಿ ಜಪ ಅಭಿಯಾನ ಹಾಗೂ ಲಕ್ಷ ಲಲಿತಾ ಸಹಸ್ರನಾಮ ಪಾರಾಯಣ ಅಭಿಯಾನ ಮತ್ತು ಮಹಾಯಾಗ” ಕಾರ್ಯಕ್ರಮ ದ ಅಂಗವಾಗಿ ಪೂರ್ವಭಾವಿ ಸಭೆಯನ್ನು ದಿನಾಂಕ 8-1-2023 ನೇ ಭಾನುವಾರ ಸಂಜೆ ಕೋಟ ಮಾಂಗಲ್ಯ ಮಂದಿರದಲ್ಲಿ ನಡೆಸಲಾಯಿತು. 
 ಈ ಕಾರ್ಯಕ್ರಮದಲ್ಲಿ ಶಾಂತಿಮತೀ ಪ್ರತಿಷ್ಠಾನ ದ ಅಧ್ಯಕ್ಷರಾದ ಸಚ್ಚಿದಾನಂದ ಅಡಿಗ ವಡ್ಡರ್ಸೆ, ಕೋಟ ಹಿರೇ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಗಣೇಶ ಭಟ್, ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸದಸ್ಯರಾದ ಶಿವರಾಮ ಉಡುಪರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರತಿಷ್ಠಾನ ದ ಮಾಜಿ ಅಧ್ಯಕ್ಷ ಪ್ರಸನ್ನ ಭಟ್ ಸ್ವಾಗತಿಸಿ ವಿದ್ವಾನ್ ವಿಜಯ್ ಕುಮಾರ್ ಮಂಜರ್ ಪ್ರಾಸ್ತಾವಿಕ ಮಾತನಾಡಿ ಅಭಿಯಾನ ಯಾವ ರೀತಿಯಲ್ಲಿ ಸಾಗಲಿದೆ ಎಂಬುದನ್ನು ಸವಿಸ್ತಾರವಾಗಿ  ತಿಳಿಸಿದರು, ರಾಮಚಂದ್ರ ಉಡುಪ ಬಾರ್ಕೂರು ಕಾರ್ಯಕ್ರಮ ನಿರೂಪಿಸಿದರು. 
 ಶಾಂತಿಮತೀ ಪ್ರತಿಷ್ಠಾನ ದ ಅಧ್ಯಕ್ಷರಾದ ಸಚ್ಚಿದಾನಂದ ಅಡಿಗ ವಡ್ಡರ್ಸೆ ಧನ್ಯವಾದ ಸಮರ್ಪಣೆಗೈದರು, ಶಾಂತಿಮತೀ ಪ್ರತಿಷ್ಠಾನ ದ ಈ ಮಹತ್ಕಾರ್ಯ ಕ್ಕೆ ಬ್ರಾಹ್ಮಣ ಬಾಂಧವರಿಂದ ಸಂಪೂರ್ಣ ಸಹಕಾರದ ಭರವಸೆ ದೊರಕಿತು, ಫೆಬ್ರವರಿ 3 ನೇ ತಾರೀಖು ಬೆಳಿಗ್ಗೆ ತೀರ್ಥಬೈಲ್ ಶಂಕರನಾರಾಯಣ ದೇವಸ್ಥಾನದಲ್ಲಿ ಅಭಿಯಾನ ಪ್ರಾರಂಭ ಮಾಡಲು ತೀರ್ಮಾನಿಸಲಾಯಿತು.
 
 
 
 
 
 
 
 
 
 
 

Leave a Reply