ಶ್ರೀರಾಘವೇಂದ್ರ ಗುರುಸಾರ್ವಭೌಮರ 352 ನೇ ಆರಾಧನಾ ಮಹೋತ್ಸವದಲ್ಲಿ, ಉಡುಪಿ ರಥಬೀದಿಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ, ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ವಿಶೇಷ ಪೂಜೆ ನೆರವೇರಿಸಿದರು. ಶ್ರೀಕೃಷ್ಣಮಠದ ಚಂದ್ರ ಶಾಲೆಯಲ್ಲಿ ಶ್ರೀಕೃಷ್ಣ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿದರು.