ಮೂಲತಃ ಧರ್ಮಸ್ಥಳದ ಪ್ರಸ್ತುತ ಉಡುಪಿಯಲ್ಲಿ ವಾಸ್ತವ್ಯ ಹೊಂದಿರುವ ವಿದ್ವಾನ್ ಉದಯ ಸರಳತ್ತಾಯ ಮತ್ತು ವಿದ್ಯಾ ದಂಪತಿಗಳ ಪುತ್ರರಾಗಿರುವ ಅನಿರುದ್ದ ತನ್ನ ಹತ್ತನೇ ತರಗತಿಯ ವಿದ್ಯಾಭ್ಯಾಸವನ್ನು ಪೊರೈಸಿದ್ದಾರೆ.
ಅನಿರುದ್ದ ಕಿರಿಯ ವಯಸ್ಸಿನಿಂದಲೂ ದೇವರು ಹಾಗೂ ಧಾರ್ಮಿಕ ಚುಟುವಟಿಕೆಗಳಲ್ಲಿ ಆಸಕ್ತಿ ಉಳ್ಳವನಾಗಿದ್ದು ಮಠ ಸಂಪ್ರದಾಯಗಳ ಆಚರಣೆ ಹಾಗೂ ವಿಧಿ ವಿಧಾನಗಳ ಬಗ್ಗೆ ಹತ್ತಿರದ ಪರಿಯವಿದ್ದು ವೇದಾಂತ ಶಾಸ್ತ್ರಗಳ ಸಾರವನ್ನು ಅರಿಯುವ ಮನಃ ಉಳ್ಳವನಾಗಿದ್ದು ತಾನೇ ಸ್ವತಃ ಶಿರೂರು ಮಠಕ್ಕೆ ಯತಿಯಾಗುವೆನೆಂದು ತನ್ನ ಅಭಿಪ್ರಾಯವನ್ನು ತನ್ನ ತಂದೆಯ ಬಳಿ ಹೇಳಿದ್ದಾರೆ.
ಈ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಂಡ ಸರಳತ್ತಾಯರು ಆತನ ಜಾತಕವನ್ನು ವಿಮರ್ಶಿಸಿ, ಪ್ರಶ್ನೆ ಹಾಕಿ ಚಿಂತಿಸಿದಾಗ ಆತನಿಗೆ ಪೀಠಾಧಿಪತ್ಯ ಯೋಗವಿದೆ ಎಂದು ತಿಳಿಯಿತು.
ಮೇ.14ರಂದು ಪಟ್ಟಾಭಿಷೇಕ: ಶಿರಸಿ ಬಳಿಯಿರುವ ಸೋಂದೆ ಮೂಲ ಮಠದಲ್ಲಿ ಮೇ11ರಿಂದ 14ರವರೆಗೆ ಸನ್ಯಾಸ ಸ್ವೀಕಾರ, ಪಟ್ಟಾಭಿಷೇಕ ಮುಂತಾದ ಕಾರ್ಯಕ್ರಮಗಳು ನಡೆಯಲಿದೆ. ಮೇ.13ರ ಬೆಳಗ್ಗೆ 7.30ರಿಂದ 8 ಗಂಟೆಯೊಳಗಿನ ಮುಹೂರ್ತದಲ್ಲಿ ಸನ್ಯಾಸ ಸ್ವೀಕಾರ ನಡೆಯಲಿದೆ.
ಮೇ.14ರಂದು ಮಧ್ಯಾಹ್ನ 12.35ರಿಂದ 12.50ರ ಅಭಿಜಿನ್ ಮುಹೂರ್ತ ದಲ್ಲಿ ಶೀರೂರು ಮಠದ 31ನೇ ಮಠಾಧಿಪತಿಯಾಗಿ ಪಟ್ಟಾಭಿಷೇಕ ನಡೆಯಲಿದೆ.