ಗೋರಖನಾಥಪುರದ ಶ್ರೀ ಸೋಮರನಾದ ಬಾಬಾಜಿ ಹಿಮಾಲಯದಲ್ಲಿ ವಾಸಿಸುತ್ತಿರುವ ನಾಥ ಸಂಪ್ರದಾಯದ ಅವಧೂತ ಮಹಾಸಭಾದ ಬಾಬಾ ಶ್ರೀ ಸೋಮರನಾಥ ಬಾಬಾಜಿ ಇವರು ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅತಿ ರುದ್ರ ಮಹಾಯಾಗದ ಪೂರ್ವ ತಯಾರಿಯನ್ನು ನೋಡಿ, ಈ ಮಹಾ ಕಾರ್ಯ ಆ ಶಿವನ ಪ್ರೇರಣೆ ಮತ್ತು ಅನುಗ್ರಹದಿಂದ ನೆರವೇರುತ್ತಿದೆ.
ಶಿವನನ್ನು ಇಲ್ಲಿ ಭಜಿಸುವುದರಿಂದ ಈ ಪ್ರದೇಶ ಪಾವನ ತಾಣವಾಗಿ ಪರಿವರ್ತಿತವಾಗುತ್ತದೆ. ಅತಿರುದ್ರ ಮಹಾಯಾಗ ಯಶಸ್ವಿಯಾಗಲಿ, ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ಈ ಮಹಾಯಾಗದಿಂದ ಭಕ್ತ ಜನಸ್ತೋಮದ ಜೀವನ ಧನ್ಯವಾಗಲಿ ಎಂದು ಆಶೀರ್ವದಿಸಿದರು. ಭಕ್ತಾದಿಗಳು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಈ ಅಪರೂಪದ ಅತಿ ರುದ್ರ ಮಹಾಯಾಗದಲ್ಲಿ ಭಾಗವಹಿಸಿ, ಧನ್ನರಾಗುವರು ಎಂದು ಹರಸಿದರು.
ಶ್ರೀ ಉಮಾಮಹೇಶ್ವರ ದೇವಸ್ಥಾನ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಮಹೇಶ್ ಠಾಕೂರ್, ಟ್ರಸ್ಟಿಗಳಾದ ಶ್ರೀ ದಿನೇಶ್ ಪ್ರಭು, ಯಾಗ ಸಮಿತಿಯ ಡಾ| ಬಾಲಕೃಷ್ಣ ಮದ್ದೋಡಿ, ಶ್ರೀ ರತ್ನಾಕರ್ ಇಂದ್ರಾಳಿ, ಡಾ| ಜಯರಾಜ್ ಬಾಲಕೃಷ್ಣ ಉಪಸ್ಥಿತರಿದ್ದರು.