ಗರ್ಬಾ ದಾಂಡಿಯ ನೃತ್ಯಕ್ಕೆ ಹೆಜ್ಜೆ ಹಾಕಿದ ಜಿ. ಶಂಕರ್ ದಂಪತಿ

ಉಚ್ಚಿಲ: ದ.ಕ. ಮೊಗವೀರ ಮಹಾಜನ ಸಂಘದ ಆಶ್ರಯದಲ್ಲಿ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ಉಚ್ಚಿಲ ದಸರಾ‌ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಂಗಳವಾರ ರಾತ್ರಿ ನಡೆದ ಗರ್ಬಾ ದಾಂಡಿಯ ನೃತ್ಯಕ್ಕೆ ದೇವಳದ ಗೌರವ ಸಲಹೆಗಾರ ನಾಡೋಜ ಡಾl ಜಿ. ಶಂಕರ್ ಮತ್ತವರ ಪತ್ನಿ ಶಾಲಿನಿ ಶಂಕರ್ ನೃತ್ಯದಲ್ಲಿ ಹೆಜ್ಜೆ ಹಾಕಿದರು. 
ಈ ಸಂದರ್ಭದಲ್ಲಿ  ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಸಹಿತ ಕಾರ್ಯ ಕ್ರಮದಲ್ಲಿ ಭಾಗವಹಿಸಿದ್ದ ಗಣ್ಯ ಅತಿಥಿಗಳು ಶ್ರೀ ಶಾರದಾ ದೇವಿಯ ವಿಗ್ರಹದ ಮುಂಭಾಗ ನೃತ್ಯ ಸೇವೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮಕ್ಕೆ ಕಳೆ ನೀಡಿದರು. 
 
 
 
 
 
 
 
 
 
 
 

Leave a Reply