ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ ಭೇಟಿ

ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆಯವರು ಗುರುವಾರ ಸಂಜೆ  ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಳದ ಪ್ರಧಾನ ಅರ್ಚಕ ವೇ.ಮೂ.ಕೆ.ವಿ.ರಾಘವೇಂದ್ರ ಉಪಾಧ್ಯಾಯ ಹಾಗೂ ವಿಷ್ಣು ಮೂರ್ತಿ ಉಪಾಧ್ಯಾಯ ರವರು ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.

ದೇವಳದ ವತಿಯಿಂದ ಆರ್ ವಿ ದೇಶಪಾಂಡೆಯವರನ್ನು ಸನ್ಮಾನಿಸಲಾಯಿತು.ಈ ಸಂದರ್ಭ ದೇವಸ್ಥಾನದ ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್, ದೇವಳದ ಪ್ರಧಾನ ಪ್ರಬಂಧಕ ಸತೀಶ್ ಅಮೀನ್ ಪಡುಕರೆ ಹಾಗೂ ದೇವಳದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply