​ಗೋವು ಸಾಕಲು ಮಾಲಿನ್ಯ ನಿಯಂತ್ರಣ ಮಂಡಳಿ​​ಯಿಂದ ಅನುಮತಿ ಕಡ್ಡಾಯ ಆದೇಶ ಹಿಂಪಡೆಯಲಿ:ಯಶ್‌ಪಾಲ್ ಸುವರ್ಣ

ರಾಜ್ಯದಲ್ಲಿ ಗೋಶಾಲೆ, ಡೇರಿ ಫಾರಂ ಹಾಗೂ ಹೈನುಗಾರಿಕಗೆ ದನಗಳನ್ನು ಸಾಕಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ​ಯಿಂದ ಕಡ್ಡಾಯವಾಗಿ ಅನುಮತಿ ಪಡೆಯುವಂತೆ ನೀಡಿರುವ ಆದೇಶವನ್ನು ಪುನರ್‌ಪರಿಶೀಲಿಸಿ ರಾಜ್ಯ ಸರಕಾರ ಕೂಡಲೇ ಹಿಂಪಡೆಯುವಂತೆ ಯಶ್‌ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಗೋ ಮಾತೆಯಾಗಿ ಶ್ರಧ್ದಾ ಭಕ್ತಿಯಿಂದ ಸಾಕುವ ಗೋವುಗಳಿಗೆ ಭಾರತದ ಸಂಸ್ಕೃತಿಯಲ್ಲಿ ಪ್ರಧಾನ ಪಾತ್ರವಿದೆ. ಗೋವುಗಳು ಕೃಷಿ ಪ್ರಧಾನವಾದ ನಮ್ಮ ದೇಶದ ಆರ್ಥಿಕತೆಗೆ ಪೂರಕವಾಗಿ ರೈತರ ಕೃಷಿ ಚಟುವಟಿಕೆ ಹಾಗೂ ಹೈನುಗಾರಿಕೆಯ ಮೂಲಕ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಗೋವಿನ ಪ್ರತಿಯೊಂದು ಉತ್ಪನ್ನಗಳು ಕೂಡಾ ತನ್ನದೇ ವೈಶಿಷ್ಟದಿಂದ ಕೃಷಿ ಚಟುವಟಿಕೆ, ಆಹಾರ, ಆರೋಗ್ಯ ದೃಷ್ಟಿಯಿಂದ ವೈಜ್ಞಾನಿಕವಾಗಿಯೂ ಮಹತ್ವವನ್ನು ಪಡೆದಿದೆ.​​


ಗೋವಿನ ಮಹತ್ವದ ಬಗ್ಗೆ ಅನುಭವ ಹಾಗೂ ಮಾಹಿತಿಯ ಕೊರತೆಯಿಂದ ಪೂರ್ವಾಗ್ರಹಪೀಡಿತರಾಗಿ  ಅಭಿಯಾನ ರೂಪಿಸಿ  ರಾಷ್ಟ್ರೀಯ  ಹಸಿರು ಪೀಠದಲ್ಲಿ ದೂರನ್ನು ದಾಖಲಿಸಿರುವ ಹಿನ್ನೆಲೆಯಲ್ಲಿ, ​ರಾಷ್ಟ್ರೀಯ ಹಸಿರು ಪೀಠ ನೀಡಿರುವ ಆದೇಶದಂತೆ ರಾಜ್ಯ ಸರಕಾರ ಜಾರಿಗೆ ತಂದಿರುವ ಈ ಕಾನೂನು ಹೈನುಗಾರಿಕೆಯನ್ನೇ ನಂಬಿರುವ ರೈತರಲ್ಲಿ ಗೊಂದಲ ಮೂಡಿಸಿದೆ. ರಾಷ್ಟ್ರೀಯ  ಹಸಿರು ಪೀಠ ಈ ಬಗ್ಗೆ ಗೋವುಗಳ ಸಾಕಾಣಿಕೆಯ ಮಹತ್ವವನ್ನು ಪರಿಗಣಿಸಿ ತನ್ನ ಆದೇಶವನ್ನು ಪುನರ್‌ಪರಿಶೀಲಿಸಿ ಗೋ ಸಾಕಾಣೆಗೆ ಪೂರಕ ವಾತಾರವಣ ಕಲ್ಪಿಸಬೇಕಾಗಿದೆ.​​

ಹೈನುಗಾರಿಕೆಯನ್ನೇ ನಂಬಿ ಜೀವನ ಸಾಗಿಸುತ್ತಿರುವ ಲಕ್ಷಾಂತರ ಕುಟುಂಬ ಹಾಗೂ ಯಾವುದೇ ಪ್ರತಿಫಲಪೇಕ್ಷೆಯಿಲ್ಲದೇ ಗೋವು ಗಳ ಸೇವೆಯಲ್ಲಿ ಕಾರ್ಯನಿರತವಾಗಿರುವ ಗೋಶಾಲೆಗಳಿಗೆ ಸ್ಥೆರ್ಯ ತುಂಬುವ ನಿಟ್ಟಿನಲ್ಲಿ ರಾಜ್ಯ ಸರಕಾರ ಈ ಆದೇಶವನ್ನು ಹಿಂಪಡೆದು ಗೋ ಸಂರಕ್ಷಣೆಗೆ ಪ್ರೋತ್ಸಾಹ ನೀಡುವಂತೆ ಮನವಿ ಮಾಡುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.​

​​​​

 
 
 
 
 
 
 
 
 
 
 

Leave a Reply