ಶಿರ್ವ ಸಂತ ಮೇರಿ ಕಾಲೇಜು ವಿದ್ಯಾರ್ಥಿ ಸತ್ಯ ಸುಬ್ರಹ್ಮಣ್ಯ ವಿ.ಎಸ್.ಗೆ ನಾಲ್ಕನೇ ಸ್ಥಾನ 

ಶಿರ್ವ: ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಸಂಸ್ಥೆ, ಶಿರ್ವ ಸಂತ ಮೇರಿ ಕಾಲೇಜಿನ ವಿದ್ಯಾರ್ಥಿ ಸತ್ಯ ಸುಬ್ರಹ್ಮಣ್ಯ ವಿ.ಎಸ್. ರವರು ಮಂಗಳೂರು ವಿಶ್ವವಿದ್ಯಾನಿಲಯ 2020ರ ಸಪ್ಟೆಂಬರ್ನ ನಲ್ಲಿ ನಡೆಸಿದ ಪದವಿ ಪರೀಕ್ಷೆಯಲ್ಲಿ ಗಣಕ ವಿಜ್ಞಾನ ವಿಭಾಗ ಬಿ.ಸಿ.ಎ. ದಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ.
ಕಾಸರಗೋಡಿನ ಶ್ರೀ. ವೆಂಕಟೇಶ್ವರ ಭಟ್ ಮತ್ತು ಶ್ರೀಮತಿ ಗೌರಿ ಅವರ ಪುತ್ರರಾದ ಅವರು ಶೇಕಡಾ 95.72% ಅಂಕಗಳೊಂದಿಗೆ ನಾಲ್ಕನೇ ಸ್ಥಾನಗಳಿಸಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಆಡಳಿತ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
 
 
 
 
 
 
 
 
 

Leave a Reply