ಕುಂದಾಪುರ: ಇಲ್ಲಿ ಉಪ ವಲಯ ಅರಣ್ಯಾಧಿಕಾರಿ ಹಸ್ತಾ ಶೆಟ್ಟಿ ಅವರು ಎಸಿಎಫ್ ಆಗಿ ಆಯ್ಕೆಯಾಗಿದ್ದಾರೆ.

ಅಪ್ಪ ಮೇಸ್ತ್ರಿ, ಮಗಳು ಎಸಿಎಫ್.

ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಪ್ರಕಟಿಸಿದ್ದು ಫಾರೆಸ್ಟ್ರಿ ವಿಭಾಗದಲ್ಲಿ ಹಸ್ತಾ ಶೆಟ್ಟಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

2017-18ನೇ ಸಾಲಿನ ನೇಮಕಾತಿಗಾಗಿ 2018ರ ಸೆ. 5ರಂದು ಗ್ರೂಪ್‌ ಎ ವೃಂದದ 24 ಎಸಿಎಫ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿತ್ತು.

ಪುತ್ತೂರಿನ ಕುಂಬ್ರದ ಪುರಂದರ ಶೆಟ್ಟಿ-ವಾರಿಜಾ ಶೆಟ್ಟಿ ದಂಪತಿಯ ಪುತ್ರಿ ಹಸ್ತಾ ಶೆಟ್ಟಿ ಅವರು ಪ್ರಾಥಮಿಕ ಪ್ರೌಢಶಿಕ್ಷಣ ಪುತ್ತೂರಿನಲ್ಲಿ ಪಡೆದು ಪಿಯು ವಿದ್ಯಾಭ್ಯಾಸವನ್ನು ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಪಡೆದಿದ್ದರು. ಬಳಿಕ ಮಡಿಕೇರಿಯ ಪೊನ್ನಂಪೇಟೆಯ ಕಾಲೇಜಿನಲ್ಲಿ 4 ವರ್ಷಗಳ ಫಾರೆಸ್ಟ್ರಿ ಡಿಗ್ರಿಯನ್ನು ಪೂರೈಸಿ 2019ರಲ್ಲಿ ಕುಂದಾಪುರಕ್ಕೆ ಉಪ ವಲಯ ಅರಣ್ಯಾಧಿಕಾರಿಯಾಗಿ ನೇಮಕವಾಗಿದ್ದರು

 
 
 
 
 
 
 
 
 
 
 

Leave a Reply