ಕೆ. ಅಜಿತ್ ಕುಮಾರ್ ಗೆ ಶ್ರೀವಾದಿರಾಜಾನುಗ್ರಹ’ ಪ್ರಶಸ್ತಿ

ಹಾದಿಗಲ್ಲು ಶ್ರೀ ಅಭಯಲಕ್ಷ್ಮೀ ನರಸಿಂಹ ದೇವಾಲಯದ ವರ್ಧಂತ್ಯುತ್ಸವದ ಪ್ರಯುಕ್ತ 11.04.2023 ರಂದು ಜರಗಿದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಕಲಾಕಾರ್ಯಕ್ರಮದಲ್ಲಿ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾಮಂಡಳಿ ಅಂಬಲಪಾಡಿ ಅಧ್ಯಕ್ಷ ಕೆ. ಅಜಿತ್ ಕುಮಾರ್ ಹಾಗೂ ಹಿರಿಯ ಯಕ್ಷಗಾನ ಕಲಾವಿದ ಶಿವಶಂಕರ ಕೆ. ಎಸ್. ಭಟ್ ಇವರಿಗೆ ತಲಾ ರೂ. 10,000/- ಹಮ್ಮಿಣಿಯೊಂದಿಗೆ ‘ಶ್ರೀವಾದಿರಾಜಾನುಗ್ರಹ’ ಪ್ರಶಸ್ತಿಯನ್ನು ದೇವಳದ ಧರ್ಮದರ್ಶಿ ಹಾದಿಗಲ್ಲು ಲಕ್ಶ್ಮೀ ನಾರಾಯಣರು ನೀಡಿ ಗೌರವಿಸಿದರು. 
 
ಈ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಪದಾಧಿಕಾರಿಗಳಾದ ಎಸ್. ವಿ. ಭಟ್, ಮುರಲಿ ಕಡೆಕಾರ್ ನಾರಾಯಣ ಎಂ. ಹೆಗಡೆ ಹಾಗೂ ಭಾಗವತರಾದ ಕೆ. ಜೆ. ಗಣೇಶ್ ಉಪಸ್ಥಿತರಿದ್ದರು. ಸಭಾಕಾರ್ಯಕ್ರಮದ ಬಳಿಕ ನರಸಿಂಹ ತುಂಗರ ನಿರ್ದೇಶನದಲ್ಲಿ ಅಂಬಲಪಾಡಿ ಲಕ್ಷ್ಮೀ ಜನಾರ್ದನ ಯಕ್ಷಗಾನ ಮಂಡಳಿಯ ಬಾಲಕಲಾವಿದರಿಂದ ‘ಮಾಯಾಪುರಿ ಮಹಾತ್ಮೆ’ ಯಕ್ಷಗಾನ ಪ್ರಸ್ತುತಗೊಂಡಿತು.
 
 
 
 
 
 
 
 
 
 
 

Leave a Reply