ಅಕ್ಷತಾ ಗಿರೀಶ್ ರವರ ಸಾಧನೆಗೆ ಒಲಿದ “ಸಾಧನಾಶ್ರೀ ” ಪುರಸ್ಕಾರ

ಉಡುಪಿ, ನ.7 : ಜೇಸಿಐ ಭಾರತ ವಲಯ 15 ರ ವ್ಯವಹಾರ ಸಮ್ಮೇಳನ ‘ಉನ್ನತಿ’ ಕುಂದಾಪುರ ಸಹನಾ ಕನ್ವೆಕ್ಷನ್ ನಲ್ಲಿ ಜರಗಿತು.

ಈ ಕಾಯ೯ಕ್ರಮದಲ್ಲಿ ಜೇಸಿಐ ಪೂವ೯ ವಲಯ ಉಪಾಧ್ಯಕ್ಷೆ , ಪತ್ರಕರ್ತೆ ಅಕ್ಷತಾ ಗಿರೀಶ್ ರಿಗೆ ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜೇಸಿ ಕುಂದಾಪುರದ ಪೂರ್ವ ಅಧ್ಯಕ್ಷರಾಗಿ ,ಕೋಟೇಶ್ವರ ರೋಟರಿ ಕ್ಲಬ್ ನ ಅನ್ಸ್ ನ ಅಧ್ಯಕ್ಷರಾಗಿ, ಪ್ರಧಾನಮಂತ್ರಿ ಪ್ರಚಾರ ಪ್ರಸಾರ ಸಮಿತಿಯ ಜಿಲೢಾ ಮಹಿಳಾ ಅಧ್ಯಕ್ಷರಾಗಿ, ಅನೇಕ ಸಂಘ ಸಂಸ್ಥೆಗಳಲ್ಲಿ ಸದಸ್ಯರಾಗಿ, ತರಬೇತುದಾರರಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ

ಕಾರ್ಯಕ್ರಮದಲ್ಲಿ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷರಾದ ಜೆ ಸಿ ಸದಾನಂದ ನಾವಡ, ವಲಯ ಅಧ್ಯಕ್ಷೆ ಸೌಜನ್ಯ ಹೆಗ್ಡೆ, ಸಂಯೋಜಕ ರಾದ ಸಮದ್ ಖಾನ್ ಉಪಾಧ್ಯಕ್ಷರಾದ ಜೆಸಿ ಗಿರೀಶ್ ಎಸ್ ಪಿ, ಜೆಸಿ ದರ್ಶಿತ್ ಶೆಟ್ಟಿ , ಜೆಸಿ ಶರತ್ ಕುಮಾರ್, ಜೆಸಿಐ ಕುಂದಾಪುರದ ಅಧ್ಯಕ್ಷರಾದ ವಿಜಯ ನರಸಿಂಹ ಐತಾಳ್, ಪೂರ್ವಾಧ್ಯಕ್ಷರಾದ ವಿಷ್ಣು ಕೆ ಬಿ,
ಉದ್ಯಮಿ ಗಿರೀಶ್ ಐತಾಳರ ಪತ್ನಿ. ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply