ಸುಮಾರು ಇಪ್ಪತೈದು ವರ್ಷಗಳಿಂದಲೂ ಕನ್ನಡ ಸಾಹಿತ್ಯ ಕೃಷಿ ಮಾಡುತ್ತಿರುವ ಅನಿತಾ ಸಿಕ್ವೇರಾ ಉಡುಪಿ ಇವರ ಸಾಹಿತ್ಯ ಸೇವೆಯನ್ನು ಗುರುತಿಸಿ ಮಂದಾರ ಕಲಾವಿದರ ವೇದಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೀದರ ಇದರ ವತಿಯಿಂದ 18.12.2022ರಂದು ರಾಜ್ಯಮಟ್ಟದ ‘ಕಾವ್ಯ ಪ್ರಭಾಂಜಲಿ’ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು.