ಪದೊನ್ನತಿ ಹೊಂದಿ ವರ್ಗಾವಣೆಗೊಂಡ ವಿಶ್ವನಾಥ ಬಾಯರಿಯವರಿಗೆ ಅಭಿನಂದನೆ

ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಪ್ರಭಾರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಶ್ವನಾಥ ಬಾಯರಿಯವರು ಇತ್ತೀಚೆಗೆ ಪದೊನ್ನತಿ ಹೊಂದಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ವರ್ಗಾವಣೆಗೊಂಡ ಸಂದರ್ಭದಲ್ಲಿ ಕಿದಿಯೂರು ಶ್ರೀ ವಿದ್ಯಾಸಮುದ್ರ ತೀರ್ಥ ಪ್ರೌಢಶಾಲೆಯ ವತಿಯಿಂದ ಸಮ್ಮಾನಿಸಲಾಯಿತು. 
 
ಈ ಸಂದರ್ಭದಲ್ಲಿ ಯು ಕಮಲಾ ಬಾಯಿ ಪ್ರೌಢಶಾಲಾ ದೈಹಿಕ ಶಿಕ್ಷಕ ಶ್ರೀ ಸುದರ್ಶನ್ ನಾಯಕ್ ಮತ್ತು ಸಂತ ಸಿಸಿಲಿ ವಿದ್ಯಾಸಂಸ್ಥೆಯ ಶ್ರೀ ದಿನೇಶ್ ಕುಮಾರ್ ಮುಖ್ಯ ಶಿಕ್ಷಕಿ ಶ್ರೀಮತಿ ಪೂರ್ಣಿಮಾ, ದೈ ಶಿ ಶಿಕ್ಷಕ ರವಿ ಪ್ರಸಾದ್, ಸಹ ಶಿಕ್ಷಕ ಸಂಪತ್ ಕುಮಾರ್ ಉಪಸ್ಥಿತರಿದ್ದರು. 
 
 
 
 
 
 
 
 
 
 
 

Leave a Reply