ಎಸ್.ಎಸ್.ಎಲ್.ಸಿ. ಪ್ರತಿಭಾನ್ವಿತ ವಿದ್ಯಾರ್ಥಿನಿ ದೃಶ್ಯ ಶೆಟ್ಟಿಯವರಿಗೆ ಬಿಜೆಪಿ ಅಂಬಲಪಾಡಿ-ಕಡೆಕಾರು ಮಹಾ ಶಕ್ತಿಕೇಂದ್ರದಿಂದ ಗೌರವಾರ್ಪಣೆ

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 96.5% ಅಂಕ ಗಳಿಸಿರುವ ಸೈಂಟ್ ಸಿಸಿಲಿ ಹೈಸ್ಕೂಲ್ ಉಡುಪಿ ಇದರ ಪ್ರತಿಭಾನ್ವಿತ ವಿದ್ಯಾರ್ಥಿನಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಯೋಗೀಶ್ ಶೆಟ್ಟಿಯವರ ಸುಪುತ್ರಿ ಕು! ದೃಶ್ಯ ಶೆಟ್ಟಿ ಅಂಬಲಪಾಡಿ ಇವರನ್ನು ಬಿಜೆಪಿ ಅಂಬಲಪಾಡಿ-ಕಡೆಕಾರು ಮಹಾ ಶಕ್ತಿಕೇಂದ್ರದ ವತಿಯಿಂದ ಅವರ ನಿವಾಸದಲ್ಲಿ ಶಾಲು ಹೊದೆಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಅಂಬಲಪಾಡಿ-ಕಡೆಕಾರ್ ಮಹಾಶಕ್ತಿ ಕೇಂದ್ರದ ಸಂಚಾಲಕ ರಾಜೇಂದ್ರ ಪಂದುಬೆಟ್ಟು, ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಹರೀಶ್ ಆಚಾರ್ಯ, ಬಿಜೆಪಿ ಉಡುಪಿ ನಗರ ಕಾರ್ಯದರ್ಶಿ ದಯಾಶಿನಿ ಪಂದುಬೆಟ್ಟು, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಭಾರತಿ ಭಾಸ್ಕರ್, ಬಿಜೆಪಿ ಅಂಬಲಪಾಡಿ ಬೂತ್ 178ರ ಅಧ್ಯಕ್ಷ ಮಹೇಂದ್ರ ಕೋಟ್ಯಾನ್ ಹಾಗೂ ಪಾಂಡುರಂಗ ಪಂದುಬೆಟ್ಟು, ದ್ರುವ ಶೆಟ್ಟಿ, ಸುಂದರಿ ಶೆಡ್ತಿ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply