ಕಾರು ಅಪಘಾತ : ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ನಿಧನ

ಹಾಲಾಡಿ : ಸೇತುವೆಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ(60) ಮೃತಪಟ್ಟ ಘಟನೆ ಹಾಲಾಡಿಯಲ್ಲಿ ಬುಧವಾರ ನಡೆದಿದೆ.

ಕಾರ್ಯಕ್ರಮವೊಂದನ್ನು ಮುಗಿಸಿ ಶಂಕರನಾರಾಯಣಕ್ಕೆ ಬರುತ್ತಿರುವ ಸಮಯ ಹಾಲಾಡಿಯಲ್ಲಿ ಸೇತುವೆಗೆ ಡಿಕ್ಕಿ ಹೊಡೆದಿದೆ ಪರಿಣಾಮ ಗಂಭೀರ ಗಾಯಗೊಂಡ ರಾಜೀವ ಶೆಟ್ಟಿ ಅವರು ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಸದ್ಯ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇಂದು ಸಾವನ್ನಪ್ಪಿದ ಹದ್ದೂರು ರಾಜೀವ ಶೆಟ್ಟಿ ಅವರು ಪ್ರಶಸ್ತಿ ಪುರಸ್ಕೃತ ಪ್ರಗತಿಪರ ಕೃಷಿಕರಾಗಿದ್ದರು. ಹಾಗೆ ಹೈನುಗಾರಿಕೆಯಲ್ಲಿಯೂ ಉತ್ತಮ ಸಾಧನೆ ಮಾಡಿದ್ದರು. ಅವರು ತಮ್ಮ 15 ಎಕರೆ ಭೂಮಿಯ 11 ಎಕರೆ ಗುಡ್ಡ ಪ್ರದೇಶವನ್ನು ಕೃಷಿಭೂಮಿಯಾಗಿ ಪರಿವರ್ತನೆ ಗೊಳಿಸಿ, ಬರಡು ಭೂಮಿಗೆ ಜೀವಕಳೆ ತುಂಬಿದ್ದು, ಇವರು 35 ವರ್ಷಗಳಿಂದ ಕೃಷಿ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಇನ್ನು ಹದ್ದೂರು ರಾಜೀವ ಶೆಟ್ಟಿ ಅವರಿಗೆ ಕುಂದಾಪುರ ತಾಲೂಕು ಉತ್ತಮ ಕೃಷಿಕ ಪ್ರಶಸ್ತಿ, ಸಬ್ಲಾಡಿ ಸೀನಪ್ಪ ಶೆಟ್ಟಿ ಕೃಷಿ ಸಾಧಕ ಪ್ರಶಸ್ತಿಗಳು ಲಭಿಸಿವೆ. ಅವರಿಗೆ ಅನೇಕ ಸಂಘ, ಸಂಸ್ಥೆಗಳಿಂದ ಸನ್ಮಾನಗಳು ಸಂದಿವೆ.

ಅವರು ಕೆಎಂಎಫ್ ನಿರ್ದೇಶಕರಾಗಿದ್ದು, ಬೈಲೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು. ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಪ್ರಸ್ತುತ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದು,ಶಂಕರನಾರಾಯಣ ಮಂಡಲ ಪಂಚಾಯತ್‌ ಅಧ್ಯಕ್ಷರಾಗಿದ್ದಾರೆ. ಕುಂದಾಪುರ ತಾ. ಪಂ. ಸದಸ್ಯರಾಗಿದ್ದು, ಬಿಜೆಪಿ ಪಕ್ಷದಲ್ಲಿ ಅನೇಕ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

 
 
 
 
 
 
 
 
 
 
 

Leave a Reply