ಕರುನಾಡ ರತ್ನ ರಾಜ್ಯ ಪ್ರಶಸ್ತಿಗೆ ಗಣೇಶ್ ಗಂಗೊಳ್ಳಿ ಆಯ್ಕೆ

ಕರುನಾಡ ರತ್ನ ರಾಜ್ಯ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಖ್ಯಾತ ಜಾನಪದ ಗಾಯಕ ಗಣೇಶ್ ಗಂಗೊಳ್ಳಿ ಆಯ್ಕೆಯಾಗಿದ್ದಾರೆ.

ಮಂಡ್ಯ ಜಿಲ್ಲೆಯ ಕರುನಾಡ ಸೇವಾ ಟ್ರಸ್ಟ್ ಇವರು  ರಾಜ್ಯ ಮಟ್ಟದಲ್ಲಿ ನೀಡುವ ಕರುನಾಡ ರತ್ನ ವಾರ್ಷಿಕ ಪ್ರಶಸ್ತಿಗೆ ಖ್ಯಾತ ಜಾನಪದ ಗಾಯಕ ಹಾಗೂ ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಗಣೇಶ್ ಗಂಗೊಳ್ಳಿ ಅವರು ಆಯ್ಕೆಯಾಗಿದ್ದಾರೆ. ಫೆಬ್ರವರಿ ತಿಂಗಳಲ್ಲಿ ಮೈಸೂರಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕರುನಾಡ ಸೇವಾ ಟ್ರಸ್ಟ್ (ರಿ) ಮಂಡ್ಯ್ಯದ ಅಧ್ಯಕ್ಷ ಶ್ರೀ ಅಭಿನಂದನ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 
 
 
 
 
 
 
 
 
 
 

Leave a Reply