ಪ್ರಶಸ್ತಿಗಳ ಸರದಾರನಿಗೆ ಮಗದೊಂದು ಪ್ರಶಸ್ತಿ

ಉಡುಪಿ. :- ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಟಾನ ಬೆಂಗಳೂರು ಇದರ ವತಿಯಿಂದ ನ .22 ರಂದು ಯಲಹಂಕ ಉಪನಗರ ಪ್ರಖ್ಯಾತಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸಾಧಕರಿಗೆ ಗೌರವ ಕಾಯ೯ಕ್ರಮದಲ್ಲಿ ಸಾಮಾಜಿಕ ಕಾಯ೯ಕತ೯, ತರಬೇತಿದಾರ ರಾಘವೇಂದ್ರ ಪ್ರಭು, ಕವಾ೯ಲು ರವರಿಗೆ ಸಾಮಾಜಿಕ ಸೇವೆ ಮತ್ತು ಯುವ ಸಂಘಟನೆ ವಿಭಾಗದಲ್ಲಿ ” ಕನ್ನಡ ರಾಜ್ಯೋತ್ಸವ ” ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಸ್ವಚ್ಚ ಭಾರತ ಫ್ರೆಂಡ್ಸ್ ಸಂಯೋಜಕರಾಗಿರುವ ಇವರು ಅನೇಕ ಸಮಾಜ ಮುಖಿ ಕಾಯ೯ದಲ್ಲಿ ತೊಡಗಿಸಿ ಕೊಂಡಿದ್ದಾರೆ. ಕೊಳದ ಮಠದ ಶ್ರೀ ಶಾಂತವೀರ ಸ್ವಾಮೀಜಿ, ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂತಿ೯ ಅರಳಿ ನಾಗರಾಜ್, ಖ್ಯಾತ ಗಾಯಕ ಪುತ್ತೂರು ನರಸಿಂಹ ನಾಯಕ್, ಗುಣವಂತ ಮಂಜು ಮುಂತಾದವರಿದ್ದರು.

 
 
 
 
 
 
 
 
 
 
 

Leave a Reply