ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ “ಅವನು ಹೆಣ್ಣಾಗಬೇಕು” ಕೃತಿ ಬಿಡುಗಡೆ

ಸಾಹಿತಿ ಹಾಗೂ ಉಪನ್ಯಾಸಕಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ಕವನ ಸಂಕಲನ ‘ಅವನು ಹೆಣ್ಣಾಗಬೇಕು’ ಕೃತಿ ಬಿಡುಗಡೆ ಸಮಾರಂಭವು ಫೆಬ್ರವರಿ 20 ರಂದು ನಡೆಯಲಿದೆ. 
ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ವತಿಯಿಂದ ಎಂ.ಜಿ.ಎಂ ಕಾಲೇಜು ಉಡುಪಿ ಇದರ ಸಹಯೋಗ ದೊಂದಿಗೆ ಎಂ.ಜಿ.ಎಂ. ಕಾಲೇಜಿನ ಗೀತಾಂಜಲಿ ಸಭಾಭವನದಲ್ಲಿ ಫೆಬ್ರವರಿ 20ರ ಶನಿವಾರ ಸಂಜೆ 5 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡದ ಹಿರಿಯ ಸಾಹಿತಿ ನಾಟಕಗಾರ ಎಸ್. ಎನ್. ಸೇತುರಾಂ  ಕೃತಿ ಬಿಡುಗಡೆ ಮಾಡಲಿದ್ದಾರೆ.
ಚಲನಚಿತ್ರ ಹಾಗೂ ನಾಟಕ ನಿರ್ದೇಶಕ ಕಾಸರಗೋಡು ಚಿನ್ನಾ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಸುಧಾ ಆಡುಕಳ ಕೃತಿ ವಿಮರ್ಶೆ ಮಾಡಲಿರುವರು. 
ಅಭ್ಯಾಗತರಾಗಿ ಎಂ.ಜಿ. ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ನಾಯ್ಕ್, ಎಂ.ಯು.ಪಿ ಪ್ರಧಾನ ಸಂಪಾದಕರಾದ  ಪ್ರೊ. ನೀತಾ ಇನಾಂದಾರ್, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ್ ಶೆಣೈ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಅಧ್ಯಕ್ಷ ಪ್ರೊ. ಶಂಕರ್ ಉಪಸ್ಥಿತರಿರುತ್ತಾರೆ.
ಪ್ರಾರಂಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಕಲಾವಿದರು ಅಭಿನಯಿಸುವ ಬೀದಿ ನಾಟಕ ‘ಆರೋಗ್ಯ ಭಾರತ’ ಪ್ರದರ್ಶನಗೊಳ್ಳಲಿದೆ ಎಂದು ಪ್ರತಿಷ್ಠಾನ ತನ್ನ ಪ್ರಕಟಣೆಯಲ್ಲಿ ತಿಳಿಸಿರುತ್ತದೆ.
 
 
 
 
 
 
 
 
 
 
 

Leave a Reply