ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್ ಕ್ರೀಡಾ ಸ್ಪರ್ಧೆಯಲ್ಲಿ ಕೃಷಿಕ್ ರವಿ ಪೂಜಾರಿ ತೃತೀಯ

ಉಡುಪಿ: ವಿದ್ಯೋದಯ ಟ್ರಸ್ಟ್ (ರಿ.)ನ ಅಂಗಸಂಸ್ಥೆ ವಿದ್ಯೋದಯ ಪಬ್ಲಿಕ್ ಸ್ಕೂಲ್‍ನ ಹತ್ತನೇ ತರಗತಿಯ ವಿದ್ಯಾರ್ಥಿ ಕೃಷಿಕ್ ರವಿ ಪೂಜಾರಿ ಇವರು ಐ.ಸಿ.ಎಸ್.ಇ. ಕೌನ್ಸಿಲ್ ಆಯೋಜಿಸಿದ ಸಿ.ಐ.ಎಸ್.ಇ. ರಾಷ್ಟ್ರಮಟ್ಟದ ಬ್ಯಾಡ್ಮಿಂಟನ್ ಕ್ರೀಡಾ ಸ್ಪರ್ಧೆಯಲ್ಲಿ
ಭಾಗವಹಿಸಿ ತೃತೀಯ ಸ್ಥಾನ ಗೆಲ್ಲುವ ಮೂಲಕ ಕಂಚಿನ ಪದಕ ಪಡೆದಿರುತ್ತಾರೆ. ರಾಷ್ಟ್ರಮಟ್ಟದ ಈ ಕ್ರೀಡಾ ಸ್ಪರ್ಧೆಯನ್ನು ಬೆಂಗಳೂರಿನ ವಿಶ್ವ ವಿದ್ಯಾಪೀಠ, ಯಲಹಂಕ ಇಲ್ಲಿ ಆಯೋಜಿಸಲಾಗಿತ್ತು. ಸಾಧಕ ವಿದ್ಯಾರ್ಥಿಯನ್ನು ಶಾಲಾ ಪ್ರಾಂಶುಪಾಲೆ ಶ್ರೀಮತಿ
ಅನಿತಾ ಪಿ. ರಾಜ್, ಶಾಲಾ ಆಡಳಿತ ಮಂಡಳಿಯ ಸರ್ವ ಸದಸ್ಯರು, ಬೋಧಕ – ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು
ಅಭಿನಂದಿಸಿರುತ್ತಾರೆ.

 
 
 
 
 
 
 
 
 
 
 

Leave a Reply