ಸಂಗೀತ ವಿದ್ವಾಂಸ ಮಧೂರು ಪಿ.ಬಾಲಸುಬ್ರಹ್ಮಣ್ಯಂ ಇವರಿಗೆ  ‘ಕೃಷ್ಣಾನುಗ್ರಹ’ ಪ್ರಶಸ್ತಿ. 

ಶ್ರೀಕೃಷ್ಣಮಠ ರಾಜಾಂಗಣದ ನರಸಿಂಹತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ, 15 ದಿನಗಳ ಪರ್ಯಂತ ನಡೆಯುತ್ತಿರುವ “ಶ್ರೀರಾಮ ಹನುಮದುತ್ಸವ”ದ ಸಂದರ್ಭದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಉಡುಪಿಯ ಹಿರಿಯ ಸಂಗೀತ ವಿದ್ವಾಂಸರಾದ ಮಧೂರು ಪಿ.ಬಾಲಸುಬ್ರಹ್ಮಣ್ಯಂ ಇವರನ್ನು ‘ಕೃಷ್ಣಾನುಗ್ರಹ’ ಪ್ರಶಸ್ತಿಯನ್ನಿತ್ತು ಸನ್ಮಾನಿಸಿದರು.

“ಶ್ರೀರಾಮ ಹನುಮದುತ್ಸವ”ದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಉಡುಪಿಯ ಹಿರಿಯ ಸಂಗೀತ ವಿದ್ವಾಂಸರಾದ ಮಧೂರು ಪಿ.ಬಾಲಸುಬ್ರಹ್ಮಣ್ಯಂ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ನಡೆಯಿತು. ಪಕ್ಕವಾದ್ಯದಲ್ಲಿ ವಿದ್ವಾನ್ ಶ್ರೀಧರ ಆಚಾರ್ಯ ಪಾಡಿಗಾರು ಮತ್ತು ವಿದ್ವಾನ್ ಬಾಲಚಂದ್ರ ಭಾಗವತರು ಸಹಕರಿಸಿದರು.

 
 
 
 
 
 
 
 
 
 
 

Leave a Reply