ಮಲಬಾರ್ ವಿಶ್ವರಂಗ ಪುರಸ್ಕಾರ-2024ಕ್ಕೆ’ ಐವರು ಹಿರಿಯ ರಂಗಕರ್ಮಿಗಳು

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ಪ್ರದಾನ ಮಾಡುತ್ತಿರುವ ‘ಮಲಬಾರ್ ವಿಶ್ವರಂಗ ಪುರಸ್ಕಾರ 2024ಕ್ಕೆ ‘ ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ ರಂಗಕರ್ಮಿಗಳು ಆಯ್ಕೆಯಾಗಿದ್ದಾರೆ.

 ಆರ್. ಎಲ್. ಭಟ್ ಉಡುಪಿ ( ನಾಟಕ ಸಾಹಿತ್ಯ), ಕೆ. ವಿ. ರಾಘವೇಂದ್ರ ಐತಾಳ್ , ಮುಂಬೈ( ರಂಗ ನಿರ್ದೇಶಕರು) , ಕಜೆ ರಾಮಚಂದ್ರ ಭಟ್ ( ರಂಗ ಸಂಘಟಕರು) , ಎಸ್. ವಿ. ರಮೇಶ್ ಬೇಗಾರ್ (ರಂಗ ಸಂಘಟಕರು ಹಾಗೂ ನಿರ್ದೇಶಕರು ), ಸುಜಾತ ಶೆಟ್ಟಿ (ರಂಗ ನಟಿ ) ಇವರಿಗೆ ಮಾರ್ಚ್ 26ರಂದು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನಡೆಯುವ ವಿಶ್ವರಂಗಭೂಮಿ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವರಂಗ ಪುರಸ್ಕಾರ-2024’ ಪ್ರಧಾನ ಮಾಡಲಾಗುವುದು.

 
 
 
 
 
 
 
 
 
 
 

Leave a Reply