ನಿವೃತ ಪೊಲೀಸ್ ಉಪಾಧೀಕ್ಷಕರಾದ ಪ್ರಭುದೇವ ಮಾನೆಯವರ ಸೇವಾನುಭವದ ನೆನಪುಗಳು ಕೃತಿ ಲೋಕಾರ್ಪಣೆ ಸಮಾರಂಭ ದಿನಾಂಕ 26.2. 2023 ರವಿವಾರ ಸಂಜೆ 5:00 ಗಂಟೆಗೆ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.
ಕೃತಿ ಬಿಡುಗಡೆಯನ್ನು ನಿವೃತ್ತ ಕರ್ನಾಟಕ ಲೋಕಾಯುಕ್ತರಾದ ನ್ಯಾಯಮೂರ್ತಿ ಎನ್ .ಸಂತೋಷ ಹೆಗ್ಡೆ ನೆರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಮಾಹೆ ಸಹಕುಲಾದಿಪತಿಗಳಾದ ಹೆಚ್.ಎಸ್.ಬಲ್ಲಾಳ್ ವಹಿಸಿಕೊಳ್ಳಲಿದ್ದಾರೆ.
ಲೇಖಕರು, ನಿವೃತ್ತ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಡಾ. ಎಂ.ಆರ್ ಕೇಶವ ಧರಣಿ ಇವರು ಕೃತಿಯ ಕುರಿತು ಮಾತನಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸಿ. ಎ ಸೈಮನ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ