ಪಾಂಡುರoಗ ಶಾನುಭಾಗ್ ಅವರಿಗೆ ‘ಸೇವಾಭೂಷಣ’ ಪ್ರಶಸ್ತಿ

ಯಕ್ಷಗಾನ ಕಲಾರಂಗದಲ್ಲಿ ಇಪ್ಪತ್ತೇಳು ವರ್ಷ ಕೋಶಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದ ಎಸ್. ಗೋಪಾಲಕೃಷ್ಣ ಇವರ ನೆನಪಿನಲ್ಲಿ ಸಂಸ್ಥೆ ನೀಡುವ ಸೇವಾಭೂಷಣ ಪ್ರಶಸ್ತಿಗೆ ಈ ಬಾರಿ ನಿವೃತ್ತ ಬ್ಯಾಂಕ್ ಉದ್ಯೋಗಿ, ದೃಷ್ಟಿಯ ತೊಡಕನ್ನೂ ಮೀರಿನಿಂತ ಸಾಧಕ, ಸಾವಯವ ಕೃಷಿಕ, ಸಾಮಾಜಿಕ ಕಳಕಳಿಯ ರಾಷ್ಟ್ರಪ್ರೇಮಿ, ವಿದ್ಯಾಪೋಷಕ್ ವಿದ್ಯಾರ್ಥಿಗಳಿಗೆ ನಿರಂತರ ಸ್ಫೂರ್ತಿಯಾದ ಪಾಂಡುರoಗ ಶಾನುಭಾಗ್ ಇವರು ಆಯ್ಕೆಗೊಂಡಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭವು ಫೆಬ್ರವರಿ ೨೪, ೨೦೨೪, ಶನಿವಾರ ಸಂಜೆ ೫.೦೦ಕ್ಕೆ ಪೇಜಾವರ ಮಠದ ಶ್ರೀರಾಮವಿಠಲ ಸಭಾಭವನದಲ್ಲಿ ಶ್ರೀ ಅದಮಾರು ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ಅನುಗ್ರಹದೊಂದಿಗೆ ಕಾಪು ಶಾಸಕ ಶ್ರೀ ಗುರ್ಮೆ ಸುರೇಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಜರಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿರುತ್ತಾರೆ.

 
 
 
 
 
 
 
 
 
 
 

Leave a Reply