ಉಡುಪಿಯ ಪೂರ್ಣ ಪ್ರಜ್ಞ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕ ಶ್ರೀ ಗೋಪಿ ಎಚ್ ಅವರು ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಕೆ ಬಿ ರಂಗಪ್ಪ ರವರ ಮಾರ್ಗದರ್ಶನದಲ್ಲಿ, ಸಲ್ಲಿಸಿದ ‘ಕರ್ನಾಟಕದಲಿನ ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳ ಆರ್ಥಿಕ ವಿಶ್ಲೇಷಣೆ: ಪ್ರಾಯೋಗಿಕ ಅಧ್ಯಯನ’ ಎನ್ನುವ ಸಂಶೋಧನ ಮಹಾಪ್ರಬಂಧಕ್ಕೆ ದಾವಣಗೆರೆ ವಿಶ್ವವಿದ್ಯಾಲಯವು ಪಿಎಚ್ಡಿ ಪದವಿಯನ್ನು ನೀಡಿದೆ.
ವಿಶ್ವವಿದ್ಯಾಲಯದ ಘಟಿಕೋತ್ಸವದ ಸಂದರ್ಭದಲ್ಲಿ, ಪಿಎಚ್ಡಿ ಪದವಿಯನ್ನು ಪ್ರಧಾನಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ,