ಮಂಗಳೂರು: ಜಗತ್ತಿನಲ್ಲೆಡೆ ಕೃಷ್ಣ ಮಂದಿರಗಳನ್ನು ಸ್ಥಾಪಿಸಿ ಜಗದ್ಗುರು ಶ್ರೀ ಮಧ್ವಾಚಾರ್ಯರ ಭಕ್ತಿ ಸಿದ್ದಾಂತವನ್ನು ಎಲ್ಲೆಡೆ ಪ್ರಚಾರ ನಡೆಸಿದ ಹಾಗೆಯೇ ವಿಶ್ವ ಧಾರ್ಮಿಕ ನಾಯಕರ ಒಕ್ಕೂಟದ ಅಧ್ಯಕ್ಷರಾಗಿ ಎಲ್ಲಾ ಮತ ಗಳ ಸಮನ್ವಯತೆಯನ್ನು ಸಾಧಿಸಿದ ಹಿರಿಮೆಯ ಉಡುಪಿಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಗೆ ಮಂಗಳೂರಿನಪ್ರತಿಷ್ಠಿತ ಶ್ರೀನಿವಾಸ ವಿಶ್ವವಿದ್ಯಾಲಯ ದಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.
ಶ್ರೀನಿವಾಸನ ಹೆಸರಿನಿಂದ ಬೆಳಗುತ್ತಿರುವ ವಿಶ್ವವಿದ್ಯಾಲಯವು ಮಹತ್ತರ ಸಾಧನೆಯನ್ನು ನಡೆಸುವಂತಾಗಲಿ ಶ್ರೀ ಗಳು ಹರಸಿದರು.