ಕು. ಅಪೂರ್ವ ಮತ್ತು ಕು. ಬಿ. ದೀಕ್ಷಾ ಇಬ್ಬರೂ ರ‍್ಯಾಂಕ್ ಹೋಲ್ಡರ್ 

ಉಡುಪಿ : ಮಂಗಳೂರು ವಿಶ್ವವಿದ್ಯಾನಿಲಯದ ಅಕ್ಟೋಬರ್ 2020ನೇ ಸಾಲಿನ ಎಂ.ಕಾಮ್. ಸ್ನಾತಕೋತ್ತರ ಪದವಿಗಾಗಿ ನಡೆಸಿದ ಪರೀಕ್ಷೆಯಲ್ಲಿ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕು. ಅಪೂರ್ವ ಮತ್ತು ಕು. ಬಿ. ದೀಕ್ಷಾ ಇಬ್ಬರೂ ತಲಾ 10ನೇ ರ‍್ಯಾಂಕ್ ಹಂಚಿಕೊಂಡು  ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. 
ಇವರಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗೂ  ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸರ್ವಸದಸ್ಯರು, ಕಾಲೇಜು ಪ್ರಾಂಶುಪಾಲರು, ಬೋಧಕ/ ಬೋಧಕೇತರರು ಹಾಗೂ ವಿದ್ಯಾರ್ಥಿಗಳು ತುಂಬು ಹೃದಯದ ಅಭಿನಂದನೆ ಸಲ್ಲಿಸಿದ್ದಾರೆ.
 
 
 
 
 
 
 
 
 
 
 

Leave a Reply