ಕಂಚಿನ ಪದಕದಲ್ಲಿ ಮಿಂಚಿದ ಸಮರ್ಥ ಸಾಮಗ

ಭಾರತೀಯ ಅಂಚೆ ಇಲಾಖೆ, ಉಡುಪಿ ಅಂಚೆ ವಿಭಾಗವು ಉಡುಪಿ ಎಮ್ ಜಿ ಎಮ್ ಕಾಲೇಜಿನ ರವೀಂದ್ರ ಕಲಾ ಮಂಟಪದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಅಂಚೆ ಚೀಟಿ ಪ್ರದರ್ಶನ ಕೃಷ್ಣಾಪೆಕ್ಸ್ – 2023 ರಲ್ಲಿ ಜಿ ಎಮ್ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ , ಬ್ರಹ್ಮಾವರ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿ ಸಮರ್ಥ ಸಾಮಗ ತಮ್ಮ ಸಂಗ್ರಹದ ” ಮಿನಿಯೇಚರ್ ಶೀಟ್ಸ್” ಅಂಚೆ ಚೀಟಿ ಪ್ರದರ್ಶನಕ್ಕೆ ಕಂಚಿನ ಪದಕ ಪಡೆದಿರುತ್ತಾರೆ.

ಈ ಸಂದರ್ಭದಲ್ಲಿ ದಕ್ಷಿಣ ಕರ್ನಾಟಕ ವೃತ್ತದ ಪೋಸ್ಟ್ ಮಾಸ್ಟರ್ ಜನರಲ್ ಎಲ್ ಕೆ ದಾಸ್, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕರಾದ ರಮೇಶ್ ಪ್ರಭು ಹಾಗು ಜ್ಯೂರಿ ಜಗನ್ನಾಥ ಮಣಿ ಮತ್ತು ಸಹಕಾರ ರತ್ನ ಜಯಕರ ಶೆಟ್ಟಿ ಇಂದ್ರಾಳಿ ಉಪಸ್ಥಿತರಿದ್ದರು.

ಈತ  ಕೊಡವೂರು ಮಾಧವಿ  ಹಾಗು ಸಂತೋಷ ಸಾಮಗರ ಪುತ್ರ.

 
 
 
 
 
 
 
 
 
 
 

Leave a Reply