ಸಂಧ್ಯಾ ಶೆಣೈ ಅಭಿನಂದನಾ ಕಾರ್ಯಕ್ರಮ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಸಹಕಾರದಲ್ಲಿ ನಾಳೆ ಭಾನುವಾರ ಸಂಜೆ 4:45 ರಿಂದ ಉಡುಪಿಯ ಎಂಜಿಎಂ ಕಾಲೇಜಿನ ಧ್ವನ್ಯಾಲೋಕ ದಲ್ಲಿ ಹಾಸ್ಯ ಭಾಷಣಕಾರರಾದ ಸಂಧ್ಯಾ ಶೆಣೈ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಖ್ಯಾತ ಮನೋವೈದ್ಯ ಪಿ.ವಿ ಭಂಡಾರಿಯವರು ಪ್ರಧಾನ ಭಾಷಣ ಮಾಡಲಿದ್ದಾರೆ. ಸಭಾಧ್ಯಕ್ಷತೆಯನ್ನು ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಎಂ ಎಲ್ ಸಾಮಗರು ವಹಿಸಲಿದ್ದಾರೆ. ಅತಿಥಿಗಳಾಗಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಸಂಯೋಜಕ ಪ್ರೊಫೆಸರ್ ವರದೇಶ್ ಹಿರೇಗಂಗೆ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ವಿಶ್ವನಾಥ್ ಶೆಣೆ ೖ ಹಾಗೂ ಅಧ್ಯಕ್ಷ ಪ್ರೊಫೆಸರ್ ಶಂಕರ್ ಉಪಸ್ಥಿತರಿರುತ್ತಾರೆ ಎಂದು ಪ್ರತಿಷ್ಠಾನದ ರವಿರಾಜ್ ಹೆಚ್ ಪಿ ತಿಳಿಸಿರುತ್ತಾರೆ. 

.

 
 
 
 
 
 
 
 
 

Leave a Reply