ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಆಶ್ರಯದಲ್ಲಿ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಭವಾನಿ ಮಂಟಪದಲ್ಲಿ ಶನಿವಾರ ನಡೆದ ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನದ 13ನೇ ಅಧಿವೇಶನದಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಮಾಜ ಸೇವೆಯನ್ನು ಗುರುತಿಸಿ ಅಧ್ಯಕ್ಷ ಶ್ರೀ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಅವರನ್ನು ಗೌರವಿಸಿ ಸನ್ಮಾನಿಸ ಲಾಯಿತು.
ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ರಂಜಿನಿ ವಸಂತ್, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ವಕೀಲ ವಿನಯ ಆಚಾರ್ಯ, ಸುಬೋಧ್, ರಮಾ ನಂದ ರಾವ್, ಸಂಘಟನಾ ಕಾರ್ಯದರ್ಶಿ ರಾಘ ವೇಂದ್ರ ಪ್ರಭು ಕರ್ವಾಲು ಇದ್ದರು.
ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಸ್ವಾಗತಿಸಿ, ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ವಂದಿಸಿದರು. ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ ನಿರೂಪಿಸಿ ದರು.