ನಮ್ಮ ನಡೆ ಅಶೋಕ್ ಹೇರ್ಳೆ ಕಡೆ

ಶಾಂತಿಮತೀ ಪ್ರತಿಷ್ಠಾನ ದ ಸಾಧಕರೆಡೆ ನಮ್ಮ ನಡೆ ತಿಂಗಳ ಕಾರ್ಯಕ್ರಮದ ಅಂಗವಾಗಿ ದಿನಾಂಕ 23-10-22- ನೇ ಭಾನುವಾರ ಸಂಜೆ ಕೋಟದ ನಿವೃತ್ತ ಬ್ಯಾಂಕ್ ಉದ್ಯೋಗಿ ಅಶೋಕ್ ಹೇರ್ಳೆ ಅವರನ್ನು ಗೌರವಿಸಲಾಯಿತು, ವೈಟ್ ಲಿಫ್ಟಿಂಗ್ ಹಾಗೂ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನದ ಪದಕ ಹಾಗೂ ಇನ್ನೂ ಅನೇಕ ಪದಕಗಳನ್ನು ಪಡೆದ ಅವರ ಸಾಧನೆಯನ್ನು ಗುರುತಿಸಿ ಅವರನ್ನು ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಂತಿಮತೀ ಪ್ರತಿಷ್ಠಾನ ದ ಅಧ್ಯಕ್ಷರಾದ ಚಂದ್ರಶೇಖರ ಅಡಿಗಳು ಹಾಗೂ ಸಾಲಿಗ್ರಾಮ ವಲಯ ಬ್ರಾಹ್ಮಣ ಸಭಾ ದ ಸದಸ್ಯರಾದ ಮಹಾಬಲ ಹೇರ್ಳೆ ಅವರು ಸಭೆಯಲ್ಲಿ ಉಪಸ್ಥಿತರಿದ್ದರು, ಪ್ರಸನ್ನ ಭಟ್ ಸ್ವಾಗತಿಸಿ ವಿದ್ವಾನ್ ಡಾ ವಿಜಯ್ ಕುಮಾರ್ ಮಂಜರ್ ಪ್ರಾಸ್ತಾವಿಕ ಮಾತನಾಡಿದರು ಅಧ್ಯಕ್ಷರಾದ ಚಂದ್ರಶೇಖರ ಅಡಿಗಳು ಧನ್ಯವಾದ ಸಮರ್ಪಣೆಗೈದು ರಾಮಚಂದ್ರ ಉಡುಪ ಬಾರ್ಕೂರು ಕಾರ್ಯಕ್ರಮ ನಿರೂಪಿಸಿದರು. 

ಗೌರವ ಸ್ವೀಕರಿಸಿ ಮಾತನಾಡಿದ ಶ್ರೀಯುತರು ತನ್ನ ಬಾಲ್ಯದ ದಿನಗಳಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಭಾರ ಎತ್ತುವ ಸ್ಪರ್ಧೆಯಲ್ಲಿ ತೊಡಗಿಕೊಂಡ ಅನುಭವವನ್ನು ಹಂಚಿಕೊಂಡರು, ಈ ಕಾರ್ಯಕ್ರಮದಲ್ಲಿ ಶಾಂತಿಮತೀ ಪ್ರತಿಷ್ಠಾನದ ಸದಸ್ಯರು ಹಾಗೂ ಶ್ರೀಯುತರ ಹಿತೈಷಿಗಳು ಭಾಗವಹಿಸಿದ್ದರು.

 
 
 
 
 
 
 
 
 
 
 

Leave a Reply