ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಅವರಿಗೆ ಗೌರವ

ಎ. ವಿ ಬಾಳಿಗ ಮೆಮೋರಿಯಲ್ ಆಸ್ಪತ್ರೆ  ಉಡುಪಿ ,ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ , ರೋಟರಿ ಮಣಿಪಾಲ , ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ನಾಡೋಜ ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಇವರನ್ನು ಅಂಕೋಲದ ಅವರ ಸ್ವಗೃಹದಲ್ಲಿ ಏಪ್ರಿಲ್ 6 ಬುಧವಾರದಂದು ರೂಪಾಯಿ ಐದು ಸಾವಿರ ಗೌರವಧನದೊಂದಿಗೆ ಗೌರವಿಸಲಾಯಿತು.

ಉಡುಪಿ ತಾಲೂಕು ಸಾಹಿತ್ಯ ಪರಿಷತ್  ಅಧ್ಯಕ್ಷರಾದ ರವಿರಾಜ್ ಎಚ್.ಪಿ, ಸಮಾಜ ಸೇವಕ ರಾಘವೇಂದ್ರ ಪ್ರಭು ಕರ್ವಾಲು ಮತ್ತು ಮಂಜುನಾಥ್ ಸಿರಸಿ ಉಪಸ್ಥಿತರಿದ್ದರು

 
 
 
 
 
 
 
 
 

Leave a Reply