ಪ್ರಧಾನ ವ್ಯವಸ್ಥಾಪಕ ಹಾಗು ಸಲಹೆಗಾರರಾಗಿ ಸೇವೆ ಸಲ್ಲಿಸಿದ ಶ್ರೀ ಬಿ. ರಂಗನಾಥ ಸಾಮಗರಿಗೆ ಬೀಳ್ಕೊಡುಗೆ 

????????????????????????????????????
ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್‌ನಲ್ಲಿ 35ವರ್ಷ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಪ್ರಧಾನ ವ್ಯವ ಸ್ಥಾಪಕರಾಗಿ ನಿವೃತ್ತಿ ಹೊಂದಿದ ಹಾಗೂ ಪ್ರಸ್ತುತ ಒಂದು ವರ್ಷದಿಂದ ಮುಖ್ಯ ಸಲಹೆಗಾರರಾಗಿ ಸೇವೆ ಸಲ್ಲಿಸಿರುವ ಬಿ. ರಂಗನಾಥ ಸಾಮಗರವರ ಬೀಳ್ಕೊಡುಗೆ ಸಮಾರಂಭದಲ್ಲಿ ಬ್ಯಾಂಕಿನ ಅಧ್ಯಕ್ಷ ಎಚ್. ಜಯಪ್ರಕಾಶ್ ಕೆದ್ಲಾಯ ರವರು ಸಾಮಗ ದಂಪತಿಗಳನ್ನು ಸನ್ಮಾನಿಸಿದರು.

ಬ್ಯಾಂಕಿನ ಉಪಾಧ್ಯಕ್ಷ ಪಿ. ರಾಘವೇಂದ್ರ ಭಟ್, ನಿರ್ದೇಶಕ ಪಿ.ಎನ್. ರವೀಂದ್ರ ರಾವ್, ಜಗನ್ನಾಥ್ ಜಿ., ಜಯಪ್ರಕಾಶ್ ಭಂಡಾರಿ, ದೇವದಾಸ್, ಭಾಸ್ಕರ್ ರಾವ್ ಕಿದಿಯೂರು, ಎನ್. ಸೂರ್ಯಪ್ರಕಾಶ್ ರಾವ್, ಎನ್. ಪ್ರಹ್ಲಾದ್ ಬಲ್ಲಾಳ್, ಮನೋರಮಾ ಎಸ್., ರೂಪಾ ಮೋಹನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್. ಕುಮಾರಸ್ವಾಮಿ ಉಡುಪ, ಸಹಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪಿ. ವಿಷ್ಣುಮೂರ್ತಿ ಆಚಾರ್ಯ, ಮಾಜಿ ಪ್ರಧಾನ ವ್ಯವಸ್ಥಾಪಕ ಶ್ರೀ ಬಿ. ವಿ.ಲಕ್ಷ್ಮೀನಾರಾಯಣ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
 
 
 
 
 
 
 
 
 

Leave a Reply