ಉಡುಪಿ ಕೋ-ಆಪರೇಟಿವ್ ಟೌನ್​ ಬ್ಯಾಂಕಿಗೆ​ ವಿಶಿಷ್ಟ ಸಾಧನಾ ಪ್ರಶಸ್ತಿ

 

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ​ ಬ್ಯಾಂಕಿನಲ್ಲಿ ನಡೆದ ಸಾಮಾನ್ಯ ವಾರ್ಷಿಕ ಮಹಾಸಭೆಯಲ್ಲಿ ಉಡುಪಿ ಕೋ-
ಆಪರೇಟಿವ್ ಟೌನ್ ಬ್ಯಾಂಕಿಗೆ ಪಟ್ಟಣ ಸಹಕಾರ ಬ್ಯಾಂಕುಗಳ ವಿಭಾಗದಲ್ಲಿ 2019-2020ನೇ ಸಾಲಿನಲ್ಲಿ ವ್ಯವಹಾರದಲ್ಲಿನ ಸರ್ವತೋಮುಖ ಅಭಿವೃದ್ಧಿ ಹಾಗೂ ವಿಶಿಷ್ಟ ಸಾಧನೆಗಾಗಿ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಬ್ಯಾಂಕಿನ ಅಧ್ಯಕ್ಷ ಶ್ರೀ ಎಚ್. ಜಯಪ್ರಕಾಶ್ ಕೆದ್ಲಾಯ ಹಾಗೂ​ ಮುಖ್ಯಕಾರ್ಯನಿರ್ವಹಣಾಧಿ ಶ್ರೀ ಎಸ್. ಕುಮಾರ ಸ್ವಾಮಿ ಉಡುಪರವರು ಗೌರವವನ್ನು ಸ್ವೀಕರಿಸಿದರು. ಈ ಸುಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ​ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಶ್ರೀ ಎಮ್. ಎನ್. ರಾಜೇಂದ್ರ ಕುಮಾರ್ ಮತ್ತು ನಿರ್ದೇಶಕರು ಹಾಗೂ ಉಡುಪಿ ಜಿಲ್ಲಾ ಸಹಕಾರ​ ಯೂನಿಯನ್ ಅಧ್ಯಕ್ಷ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಉಪಸ್ಥಿತರಿದ್ದರು.
 
 
 
 
 
 
 
 
 

Leave a Reply