ಗೆಳೆಯರ ಬಳಗ – ಕಾರಂತ ಪುರಸ್ಕಾರ -2023 ಕ್ಕೆ ಖ್ಯಾತ ಸಾಹಿತಿ ವೈದೇಹಿಯವರು ಆಯ್ಕೆ

ಗೆಳೆಯರ ಬಳಗ(ರಿ.)ಕಾರ್ಕಡ ಸಾಲಿಗ್ರಾಮ ಇವರು ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ, ಪ್ರತಿ ವರ್ಷವೂ ನೀಡುತ್ತಾ ಬಂದಿರುವ ‘ಗೆಳೆಯರ ಬಳಗ – ಕಾರಂತ ಪುರಸ್ಕಾರ -2023 ಕ್ಕೆ ಈ ಬಾರಿ ಕಾರಂತರ ಒಡನಾಡಿ, ಖ್ಯಾತ ಸಾಹಿತಿ ,ನಾಡು ನುಡಿ ಏಳಿಗೆಗಾಗಿ ಅನನ್ಯವಾಗಿ ತೊಡಗಿಸಿಕೊಂಡಿರುವ ಹಾಗೂ ಕಾರಂತರ ನಿಷ್ಟಾವಂತ ಅಭಿಮಾನಿಯಾಗಿರುವ ಶ್ರೀಮತಿ ವೈದೇಹಿ ಇವರು ಭಾಜನರಾಗಿದ್ದಾರೆ.ಅಸಾಧಾರಣ ವ್ಯಕ್ತಿ ಶ್ರೀಮತಿ ವೈದೇಹಿಯವರು,ಕಲೆ, ಸಾಹಿತ್ಯ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳ ಯಶಸ್ವಿಗಾಗಿ ನಿರಂತರ ಶ್ರಮಿಸಿದವರು.

ಈ ಪುರಸ್ಕಾರವು ಗೌರವಧನ ಹಾಗೂ ಸನ್ಮಾನ ಪತ್ರ, ಫಲಪುಷ್ಪ, ಶಾಲು ಇತ್ಯಾದಿಯಿಂದ ಕೂಡಿರುತ್ತದೆ.
ಗೆಳೆಯರ ಬಳಗ ಕಾರಂತ ಪುರಸ್ಕಾರ-2023 ನ್ನು ಅಕ್ಟೋಬರ್ ತಿಂಗಳ 14 ರ ಶನಿವಾರ ಸಂಜೆ ಕಾರ್ಕಡ ಗಿರಿಜಾ ಕಲ್ಯಾಣ ಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಗಣ್ಯರ ಉಪಸ್ಥಿತಿಯಲ್ಲಿ ಈ ಪುರಸ್ಕಾರ ವಿತರಿಸಲಾಗುವುದು ಎಂದು ಬಳಗದ ಅಧ್ಯಕ್ಷ ಶ್ರೀ ಕೆ. ತಾರಾನಾಥ ಹೊಳ್ಳ ತಿಳಿಸಿದ್ದಾರೆ

 
 
 
 
 
 
 
 
 
 
 

Leave a Reply