ಉಡುಪಿ : ನಿಡಂಬೂರು ಮಾಗಣೆಯ ಶ್ರೇಷ್ಠ ಸಾಧಕರಿಗೆ ನೀಡುವ ನಿಡಂಬೂರು ಶ್ರೀ ಪ್ರಶಸ್ತಿ ಯನ್ನು ಈ ಬಾರಿ ಕಿದಿಯೂರಿನ ಖ್ಯಾತ ವಯಲಿನ್ ವಾದಕಿ ವಿದ್ವಾನ್ ವಸಂತಿ ರಾಮ ಭಟ್ ಇವರಿಗೆ ಭಾನುವಾರ ಅಂಬಲಪಾಡಿ ಭವಾನಿ ಮಂಟಪದಲ್ಲಿ ನಡೆದ ಮಧೂರು ಮಾಧುರ್ಯ ಸಮಾರಂಭದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.
ವಸಂತಿ ರಾಮ ಭಟ್ ನೂರಾರು ವಿದ್ಯಾರ್ಥಿಗಳಿಗೆ ಪ್ರೀತಿಯಿಂದ ವಯಲಿನ್ ವಿದ್ಯೆಯನ್ನು ಕಲಿಸಿ, ಅವರನ್ನು ಕಲಾವಿದರನ್ನಾಗಿಸಿ ಸಮಾಜಕ್ಕೆ ನೀಡಿದ ಮಹಾನ್ ಗುರುಗಳಾಗಿದ್ದಾರೆ. ಸ್ವತಃ ಶ್ರೇಷ್ಠ ವಯಲಿನ್ ವಾದಕಿ ಯಾಗಿರುವ ವಸಂತಿ ರಾಮ್ ಭಟ್ ನಮ್ಮ ನಿಡಂಬೂರು ಮಾಗಣೆ ಹೆಮ್ಮೆಪಡುವ ಸಾಧಕಿ.
ಈ ಬಾರಿಯ ನಿಡಂಬೂರು ಶ್ರೀ ಪ್ರಶಸ್ತಿಯನ್ನು ಇವರಿಗೆ ನೀಡುತ್ತಿರುವುದು ನಮಗೆಲ್ಲ ಅಭಿಮಾನದ ಸಂಗತಿ ಎಂಬುದಾಗಿ ಪ್ರಶಸ್ತಿಯ ಸ್ಥಾಪಕರಾದ ನಿಡಂಬೂರು ಬೀಡು ಡಾ।ವಿಜಯ ಬಲ್ಲಾಳರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಈಸಂಧರ್ಭದಲ್ಲಿ ಡಾ.ಅರ್ಜುನ್ ಬಲ್ಲಾಳ್, ಡಾ. ಶ್ರುತಿ ಅರ್ಜುನ್ ಬಲ್ಲಾಳ, ವಿದ್ವಾನ್ ಮಧ್ವೇಶ ಭಟ್ ಹಾಗೂ ಜ್ಯೋತಿ ಸತೀಶ್ ಭಟ್ ಉಪಸ್ಥಿತರಿದ್ದರು.